2:40 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ, ಮೇಲರಿಮೆ ಎಂಬ ವೈರಸ್‌ ತೊಲಗಿಸಿ: ಡಾ.ಪೂರ್ಣಿಮಾ ಜೋಗಿ

26/09/2022, 23:45

ಮೂಡುಬಿದ್ರೆ(reporterkarnataka.com): ವ್ಯಕ್ತಿತ್ವ ವಿಕಸನಕ್ಕೆ ಅಡ್ಡಿಯಾಗಿರುವ ಕೀಳರಿಮೆ ಮತ್ತು ಮೇಲರಿಮೆ ಎಂಬ ವೈರಸ್‌ನ್ನು ದೂರ ಮಾಡಬೇಕಾದರೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಆ ಮೂಲಕ ಸದೃಢ ರಾಜ್ಯ ದೇಶ ಕಟ್ಟಲು ವಿದ್ಯಾರ್ಥಿಗಳು ಪಣ ತೊಡಬೇಕು ಎಂದು ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಜೋಗಿ ಹೇಳಿದರು.


ಮೂಡುಬಿದ್ರೆಯ ಆಳ್ವಾಸ್ ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಶಿವರಾಮ ಕಾರಂತ ಸಭಾಂಗಣದಲ್ಲಿ ಆಯೋಜಿಸಿದ್ದ ‘ರಾಷ್ಟ್ರೀಯ ಸೇವಾ ಯೋಜನಾ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ತಮ್ಮಆಂತರಿಕ ಶಕ್ತಿಯನ್ನು ಅರಿಯಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮ ವೇದಿಕೆಯಾಗಿದ್ದು, ಅದನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ. ಪೂರ್ಣಿಮಾ ಜೋಗಿ ನುಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ನಿವೃತ್ತ ಅಧಿಕಾರಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ರಾಷ್ಟ್ರೀಯ ಸೇವಾ ಯೋಜನೆಯು ಧರ್ಮತೀತವಾಗಿದ್ದು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದೆ. ಸೇವಾ ಮನೋಭಾವವನ್ನೇ ಧೈಯವನ್ನಾಗಿಸಿದ ಎನ್ನೆಸ್ಸೆಸ್ ಪಾಲ್ಗೊಳ್ಳುವ ಮೂಲಕ ಸಮಾಜದ ಋಣ ಸಂದಾಯ ಮಾಡಲು ಸಾಧ್ಯ, ಜ್ಞಾನ, ಕೌಶಲ್ಯ, ದೈಹಿಕ ಆರೋಗ್ಯ ಹಾಗೂ ಜೀವನ ಒಳಗೊಂಡಿರುವ ಮೌಲ್ಯಗಳನ್ನು ಎನ್ನೆಸೆಸ್‌ನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದಷ್ಟೇ, ಪತ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡುತ್ತದೆ. ವಿದ್ಯಾರ್ಥಿಗಳು ರಚನಾತ್ಮಕವಾಗಿ ತೊಡಗಿಸಿ ಕೊಂಡಾಗ ರಾಷ್ಟ್ರ ರಾಜ್ಯ, ಜಿಲ್ಲೆ, ಸ್ಥಳೀಯ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೂರ್ವ ಕಾಲೇಜಿನ ಪ್ರೊ.ಮಹಮ್ಮದ್ ಸದಾಕತ್ ಮಾತನಾಡಿ, ವಿದ್ಯಾರ್ಥಿಗಳು ಎನ್ನೆಸ್ಸೆಸ್ ಮೂಲಕ ಕಲಿತ ಸಮಯದ ಸದುಪಯೋಗ, ಶಿಸ್ತು ಹಾಗೂ ಸೇವಾ ಮನೋಭಾವನೆ ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ, ಪಿ.ಯು ಕಾಲೇಜಿನ ರಾ. ಸೆ.ಯೋ ಕಾರ್ಯಕ್ರಮ ಅಧಿಕಾರಿ ಅಂಬರೀಶ್ ಚಿಪುಲ್ನಾಕರ್ ಉಪಸ್ಥಿತರಿದ್ದರು.

ರಾಷ್ಟ್ರೀಯ ಸೇವಾಯೋಜನಾ ಕಾರ್ಯಕ್ರಮ ಅಧಿಕಾರಿ ಶಾಲೆಟ್ ಮೋನಿಸ್ ಸ್ವಾಗತಿಸಿದರು. ವಿದ್ಯಾರ್ಥಿನಿ ಜಾಹ್ನವಿ ವಂದಿಸಿದರು. ಕೃತಿಕಾ, ಚಂದ್ರಾಧರ ಅತಿಥಿಗಳನ್ನು ಪರಿಚಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು