10:22 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ನವರಾತ್ರಿ ಹಬ್ಬ: ಸೆ.28ರಿಂದ ದ.ಕ. ಜಿಲ್ಲೆಯ ಶಾಲಾ ಮಕ್ಕಳಿಗೆ ದಸರಾ ರಜೆ

26/09/2022, 23:50

ಮಂಗಳೂರು(reporterkarnataka.com): 2022-23ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಜಿಲ್ಲೆಯ ವಿವಿಧ ಭಾಗಗಳಿಂದ ಬಂದ ಮನವಿಗಳನ್ನು ಪರಿಗಣಿಸಿ ಹಾಗೂ 2022ರ ಸೆ.24ರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರ ಸೂಚನೆಯಂತೆ ಸೆ.28ರಿಂದ ಅಕ್ಟೋಬರ್ 1ರ ವರೆಗೆ ಹೆಚ್ಚುವರಿಯಾಗಿ (4ದಿನಗಳು) ಷರತ್ತಿಗೊಳಪಟ್ಟು ದ.ಕ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ಅವರು ದಸರಾ ರಜೆಯನ್ನು ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಷರತ್ತು: ಅಕ್ಟೋಬರ್ 2ರಂದು ಮಹಾತ್ಮಾಗಾಂಧಿ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು. ಹೆಚ್ಚುವರಿಯಾಗಿ ನೀಡಿರುವ 4 ದಿನಗಳ ರಜೆಯನ್ನು 2022ರ ನವೆಂಬರ್ ತಿಂಗಳಿನಲ್ಲಿ 4 ಶನಿವಾರ ಪೂರ್ಣದಿನದ ತರಗತಿಗಳನ್ನು ಹಾಗೂ ಎರಡು ಭಾನುವಾರ ಪೂರ್ಣ ಶಾಲಾ ಕೆಲಸದ ದಿನಗಳಾಗಿ ನಡೆಸಿ ಸರಿದೂಗಿಸುವಂತೆ ಆದೇಶಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು