2:53 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ

27/09/2022, 14:44

ಬಂಟ್ವಾಳ(reporterkarnataka.com):
ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ.

ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು. ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು