9:53 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ

27/09/2022, 14:44

ಬಂಟ್ವಾಳ(reporterkarnataka.com):
ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ.

ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು. ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು