10:46 AM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಬಂಟ್ವಾಳ: ಪಿಎಫ್ಐ ಜಿಲ್ಲಾಧ್ಯಕ್ಷ ಸಹಿತ 3 ಮಂದಿ ಬಂಧನ; 7 ದಿನಗಳ ನ್ಯಾಯಾಂಗ ಕಸ್ಟಡಿ

27/09/2022, 14:44

ಬಂಟ್ವಾಳ(reporterkarnataka.com):
ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಂಜಾನೆ ಬಂಟ್ವಾಳದ ಹಲವೆಡೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ತಹಶೀಲ್ದಾರ್ ಎದುರು ಹಾಜರುಪಡಿಸಿದ್ದಾರೆ.

ಪಿಎಫ್ ಐ ಜಿಲ್ಲಾಧ್ಯಕ್ಷ ಇಜಾಜ್ ಅಹಮದ್ ಸೇರಿದಂತೆ ಫಿರೋಜ್ ಖಾನ್, ರಾಝಿಕ್ ಬಂಧಿತರು. ಬಂಧಿತರನ್ನು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಂಟ್ವಾಳ ಬಿ.ಸಿ.ರೋಡ್ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈಗಾಗಲೇ ಕೆಲ ದಿನಗಳಿಂದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪಿಎಫ್ ಐ ಕಾರ್ಯಕರ್ತರ ಬಂಧನ ಹಾಗೂ ವಿಚಾರಣೆ ನಡೆಯುತ್ತಿದ್ದು, ಇದರ ಒಂದು ಭಾಗವಾಗಿ ಈ ಕಾರ್ಯಾಚರಣೆ ವರಿಷ್ಠ ಪೊಲೀಸ್ ಅಧಿಕಾರಿಗಳ ಸೂಚನೆಯಂತೆ ಬಂಟ್ವಾಳ ನಗರ ಮತ್ತು ಗ್ರಾಮಾಂತರ ಪೊಲೀಸರು ಕೈಗೊಂಡಿದ್ದಾರೆ.

ಬಂಟ್ವಾಳ ಸುತ್ತಮುತ್ತಲಿರುವ ಪಿಎಫ್ಐ ಕಾರ್ಯಕರ್ತರ ಮನೆಗಳಿಗೆ ತೆರಳಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಅವರನ್ನು ಪ್ರತಿಬಂಧಕ ಕಾಯ್ದೆಯಡಿ ಗರಿಷ್ಠ ಅವಧಿಯ ಮುಚ್ಚಳಿಕೆಗಾಗಿ ಕಾರ್ಯನಿರ್ವಾಹಕ ನ್ಯಾಯಾಧೀಶರೂ ಆಗಿರುವ ಬಂಟ್ವಾಳ ತಹಶೀಲ್ದಾರ್ ಡಾ. ಸ್ಮಿತಾ ರಾಮು ಅವರ ಮುಂದೆ ಹಾಜರುಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು