10:24 PM Monday18 - May 2026
ಬ್ರೇಕಿಂಗ್ ನ್ಯೂಸ್
ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್…

ಇತ್ತೀಚಿನ ಸುದ್ದಿ

ಪಂಚಮಸಾಲಿ ಮೀಸಲಾತಿ; ಬಿಎಸ್ ವೈ ಮಾನಸ ಪುತ್ರ, ಸಿಎಂ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ

27/09/2022, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.   ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಅವರು ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಕೂಡಿಸಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು, ಬಿಎಸ್ ವೈ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಬಿಎಸ್ ವೈ ಅವರಿಗೆ ಸಲಹೆ ನೀಡಿದರು.

ಮುಖ್ಯಮಂತ್ರಿನವರು ಬರುವ ಸಚಿವ ಸಂಪುಟದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದೆಂದು ಬರವಸೆ ನೀಡಿದ್ದಾರೆ, ಇದಕ್ಕೂ ಅವರು ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆಯನ್ನು ನೀಡಿದರು. ಕೊನೆ ಹಂತದ ಪ್ರತಿಭಟನೆ ಆಗಿದ್ದರಿಂದ ಮಾಡು ಇಲ್ಲವೇ ಮಡಿ, ಮಡಿಯುವ ಮುನ್ನ ಮೀಸಲಾತಿ ಪಡಿ ಎಂಬ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು