2:29 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಪಂಚಮಸಾಲಿ ಮೀಸಲಾತಿ; ಬಿಎಸ್ ವೈ ಮಾನಸ ಪುತ್ರ, ಸಿಎಂ ಬೊಮ್ಮಾಯಿ ಮೇಲೆ ಒತ್ತಡ ಹಾಕಬೇಕು: ಜಯಮೃತ್ಯುಂಜಯ ಸ್ವಾಮೀಜಿ

27/09/2022, 18:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com 

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.   ಯಡಿಯೂರಪ್ಪನವರ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ ನ್ಯಾಯ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಅವರು ಅಥಣಿ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ, ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ಆರ್ಥಿಕವಾಗಿ, ಹಿಂದುಳಿದ ಸಮಾಜಕ್ಕೆ ಮೀಸಲಾತಿ ಕೇಳುತ್ತಿದ್ದೇವೆ. ದಶಕಗಳ ಹೋರಾಟವಾಗಿದ್ದರೂ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ನಂಬಿಕೆಗೆ ಚ್ಯುತಿ ತರುವಂತ ಕಾರ್ಯಗಳು ನಡೆಯುತ್ತಿವೆ. ಕಳೆದ ವಾರ ಸದನದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ನವರು ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಬೇಕೆಂದು ಧ್ವನಿ ಕೂಡಿಸಿದ್ದಾರೆ. ಆದರೆ ಸದನದಲ್ಲಿ ಮಾತನಾಡಿ ಅಷ್ಟಕ್ಕೇ ಸುಮ್ಮನಾಗಬಾರದು, ಬಿಎಸ್ ವೈ ಮಾನಸ ಪುತ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮೇಲೆ ಒತ್ತಡ ಹಾಕಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಜಯ ಮೃತ್ಯುಂಜಯ ಸ್ವಾಮೀಜಿ ಬಿಎಸ್ ವೈ ಅವರಿಗೆ ಸಲಹೆ ನೀಡಿದರು.

ಮುಖ್ಯಮಂತ್ರಿನವರು ಬರುವ ಸಚಿವ ಸಂಪುಟದಲ್ಲಿ ಸಭೆ ನಡೆಸಿ ತೀರ್ಮಾನ ಮಾಡಲಾಗುವುದೆಂದು ಬರವಸೆ ನೀಡಿದ್ದಾರೆ, ಇದಕ್ಕೂ ಅವರು ತಪ್ಪಿದರೆ ನವೆಂಬರ್ 2ನೇ ವಾರದಲ್ಲಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮಾಜದಿಂದ 25 ಲಕ್ಷ ಜನಸಂಖ್ಯೆ ಸೇರಿ ವಿಧಾನಸೌಧ ಮುಂದೆ ಪ್ರತಿಭಟನೆ ಕಾರ್ಯಕ್ಕೆ ಮುಂದಾಗುತ್ತೇವೆ ಎಂದು ಸ್ವಾಮೀಜಿ ಎಚ್ಚರಿಕೆಯನ್ನು ನೀಡಿದರು. ಕೊನೆ ಹಂತದ ಪ್ರತಿಭಟನೆ ಆಗಿದ್ದರಿಂದ ಮಾಡು ಇಲ್ಲವೇ ಮಡಿ, ಮಡಿಯುವ ಮುನ್ನ ಮೀಸಲಾತಿ ಪಡಿ ಎಂಬ ಪ್ರತಿಭಟನೆಗೆ ಮುಂದಾಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು