3:57 AM Saturday14 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ಶೋಭಾ ಕರಂದ್ಲಾಜೆಯ ಹುಡುಕಿ ಸೆಲ್ಪಿ ತೆಗೆದು ಕಳುಹಿಸಿದರೆ ಬಹುಮಾನ:  ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ

28/09/2022, 14:12

ಉಡುಪಿ(reporterkarnataka.com): ಒಂದು ವಾರದಲ್ಲಿ ಉಡುಪಿ, ಕಾಪು ಅಥವಾ ಬ್ರಹ್ಮಾವರ ಕ್ಷೇತ್ರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಯಾರಿಗಾದರೂ ಸಿಕ್ಕರೆ ಅವರ ಜತೆ ಫೋಟೋ ತೆಗೆದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೆ ಕಳುಹಿಸಿದರೆ, ಮೊದಲ 5 ಮಂದಿ

ವಿಜೇತರಿಗೆ 5000 ರೂಪಾಯಿ ಬಹುಮಾನ ನೀಡಲಾಗುವುದು ಎಂದು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಸವಾಲು ಹಾಕಿದ್ದಾರೆ.

ಮಲ್ಪೆ ಕರಾವಳಿ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ಉಡುಪಿ

ಕಲ್ಮಾಡಿ ಚರ್ಚ್‌ನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ವೇಳೆ ಅವರು ಮಾತನಾಡಿದರು.

ಕರಾವಳಿ ಬೈಪಾಸ್ ವರೆಗೆ ಪಾದಯಾತ್ರೆ ನಡೆಯಿತು.

ಜಿಲ್ಲೆಯಲ್ಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಯಾವುದೇ ಕೆಲಸ ಕಾರ್ಯಗಳು ಮಾಡುತ್ತಿಲ್ಲ.

ಎಂದ ಅವರು, ಬಿಜೆಪಿ ಸಂಸದೆ ಉಡುಪಿಗೆ ಬರುವುದೆ ಇಲ್ಲ ಎಂದು ಟೀಕಿಸಿದರು.

ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು. ಸಂಸದರನ್ನು ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು ಎಂದರು.

ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ. ರಾಜ್ಯ ಬಿಜೆಪಿ ಸರಕಾರ ನಿದ್ರೆಯ ಮಂಪರಿ ನಲ್ಲಿದೆ. ಗುತ್ತಿಗೆದಾರರು ರಘುಪತಿ ಭಟ್ ಹಾಗೂ ಶೋಭಾ ಕರಂದ್ಲಾಜೆಗೆ ಶೇ.40 ಕಮಿಷನ್ ಕೊಟ್ಟಿಲ್ಲ ಎಂದು ರಸ್ತೆ ದುರಸ್ತಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು