10:35 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ: ಜೈಲಿನಲ್ಲೇ ವೈದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವಿಚಾರಣಾಧೀನ ಕೈದಿ

28/09/2022, 14:32

ಹೊಸದಿಲ್ಲಿ(reporterkarnataka.com): ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸಿದ ಘಟನೆ ನಡೆದಿದೆ. ಅತ್ಯಾಚಾರ ಆರೋಪಿಯಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿಯೊಬ್ಬ ಜೈಲು ಆವರಣದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದೆ.

ಮಂಡೋಲಿ ಜೈಲಿನಲ್ಲಿ ಸೋಮವಾರ ವೈದ್ಯೆ ಎಲ್ಲ ಕೈದಿಗಳ ಆರೋಗ್ಯ ತಪಾಸಣೆ ನಡೆಸುವ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಕೈದಿ ಬಾತ್‍ರೂಂನಲ್ಲಿ ಅಡಗಿಕೊಂಡು, ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೂ ಯತ್ನಿಸಿದ. ಆದರೆ ವೈದ್ಯೆ ಆತನನ್ನು ಆಚೆಗೆ ತಳ್ಳಿ ಹೊರಕ್ಕೆ ಓಡಿಹೋಗುವಲ್ಲಿ ಯಶಸ್ವಿಯಾದರು. ತಕ್ಷಣ ಭದ್ರತಾ ಸಿಬ್ಬಂದಿಗೆ ವಿಷಯ ಮುಟ್ಟಿಸಿದರು. ಆತನನ್ನು ಬಂಧಿಸಲಾಯಿತು ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.

ಜೈಲು ಅಧಿಕಾರಿಗಳು ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಆರಂಭಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. ಭಾರತೀಯ ದಂಡಸಂಹಿತೆಯ ಸೂಕ್ತ ಸೆಕ್ಷನ್‍ಗಳ ಅನ್ವಯ ಹರ್ಷ ವಿಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭವಿಷ್ಯದಲ್ಲಿ ಇಂಥ ಯಾವುದೇ ಘಟನೆಗಳು ನಡೆಯದಂತೆ ತಡೆಯಲು ಬರಾಕ್‍ಗಳ ಸುತ್ತ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ. ಆರೋಪಿ ಈ ಮುನ್ನ ಅತ್ಯಾಚಾರ ಪ್ರಕರಣವೊಂದರ ಸಂಬಂಧ ಜೈಲು ಸೇರಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು