6:59 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

29/09/2022, 21:19

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.  ಈ ದಾಳಿಗಳಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ದಾಖಲೆ ಕೊಟ್ಟಿದ್ದೇನೆ. ಆದರೆ ಪ್ರತಿಬಾರಿ ನನ್ನ ಮೇಲೆ ಮಾತ್ರ ಯಾಕೆ ಹೀಗೆ ದಾಳಿಗಳಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು