10:02 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

29/09/2022, 21:19

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.  ಈ ದಾಳಿಗಳಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ದಾಖಲೆ ಕೊಟ್ಟಿದ್ದೇನೆ. ಆದರೆ ಪ್ರತಿಬಾರಿ ನನ್ನ ಮೇಲೆ ಮಾತ್ರ ಯಾಕೆ ಹೀಗೆ ದಾಳಿಗಳಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು