10:25 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಆಸ್ತಿ ದಾಖಲೆಗಳ ಪರಿಶೀಲನೆ

29/09/2022, 21:19

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕನಕಪುರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಕನಕಪುರದ ತಹಶೀಲ್ದಾರ್ ಅವರನ್ನು ಕರೆದುಕೊಂಡ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ದಾಳಿ ವೇಳೆ ದಾಖಲೆಗಳ ಪರಿಶೀಲನೆ ಜೊತೆಗೆ ಜಿಲ್ಲೆಯಲ್ಲಿ ಅವರಿಗೆ ಸೇರಿದ ಆಸ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಿದೆ.

ಶಿವಕುಮಾರ್ ಕುಟುಂಬಸ್ಥರು, ಸಂಬಂಧಿಕರ ಹೆಸರಿನಲ್ಲಿನ ಭೂಮಿ ನೋಂದಣಿಯಾಗಿರುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 

ಸಿಬಿಐ ಅಧಿಕಾರಿಗಳು ಕನಕಪುರ, ದೊಡ್ಡಆಲಹಳ್ಳಿ, ಸಂತೆ  ಕೋಡಿಹಳ್ಳಿ ಮನೆ, ತೋಟದ ಮನೆ-ಜಮೀನು ಮತ್ತಿತ್ತರ ಸ್ಥಳಗಳಿಗೆ ಭೇಟಿ ನೀಡಿ ಆಸ್ತಿ-ಪಾಸ್ತಿ ಅದಕ್ಕೆ ಸಂಬಂಧಪಟ್ಟ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಿಬಿಐ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್ ಅವರು, ಕೇಂದ್ರೀಯ ತನಿಖಾ ದಳಕ್ಕೆ ತಾವು ಹೊಂದಿರುವ ಆಸ್ತಿ-ಪಾಸ್ತಿ ಬಗ್ಗೆ ಈ ಮೊದಲೇ ಎಲ್ಲ ಅಗತ್ಯ ದಾಖಲೆಗಳನ್ನು ನೀಡಿದ್ದಾಗಿ ತಿಳಿಸಿದ್ದಾರೆ.  ಈ ದಾಳಿಗಳಿಂದ ನನಗೆ ಮಾನಸಿಕವಾಗಿ ಹಿಂಸೆಯಾಗುತ್ತಿದೆ. ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳಿಗೆ ದಾಖಲೆ ಕೊಟ್ಟಿದ್ದೇನೆ. ಆದರೆ ಪ್ರತಿಬಾರಿ ನನ್ನ ಮೇಲೆ ಮಾತ್ರ ಯಾಕೆ ಹೀಗೆ ದಾಳಿಗಳಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು