6:43 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

‘ಭಾರತ್ ಜೋಡೋ ಯಾತ್ರೆ’ ಇಂದು ಕರ್ನಾಟಕ ಪ್ರವೇಶ: ರಾಜ್ಯಕ್ಕೆ ಸೋನಿಯಾ, ಪ್ರಿಯಾಂಕಾ?

30/09/2022, 09:53

ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನ 21 ದಿನಗಳ ಭಾರತ ಜೋಡೋ ಯಾತ್ರೆ ಇಂದು ಕರ್ನಾಟಕ ಪ್ರವೇಶಿಸಲಿದ್ದು, ತೆಲಂಗಾಣವನ್ನು ಪ್ರವೇಶಿಸುವ ಮೊದಲು ರಾಜ್ಯದ 7 ಜಿಲ್ಲೆಗಳಲ್ಲಿ 511 ಕಿಲೋಮೀಟರ್ ಕಾಲ್ನಡಿಗೆಯಲ್ಲಿ ಪ್ರಯಾಣಿಸಲಿದ್ದಾರೆ.

ಯಾತ್ರೆಯು ಶುಕ್ರವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯನ್ನು ಪ್ರವೇಶಿಸಲಿದೆ. ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಗಳ ಮೂಲಕ ಸಾಗಲಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಬಳ್ಳಾರಿಯಲ್ಲಿ ಬೃಹತ್ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಮಂಡ್ಯ ಜಿಲ್ಲೆಯ ಮಹಿಳೆಯರೊಂದಿಗೆ ಸಂವಾದ ನಡೆಸುವ ಸಾಧ್ಯತೆಯಿದೆ.

ಗಾಂಧಿ ಜಯಂತಿಯಂದು (ಅಕ್ಟೋಬರ್ 2) ರಾಹುಲ್ ಗಾಂಧಿ ಅವರು ಒಂದು ಕಾಲದಲ್ಲಿ ಖಾದಿ ಉದ್ಯಮಕ್ಕೆ ಹೆಸರುವಾಸಿಯಾಗಿದ್ದ ಮೈಸೂರು ಜಿಲ್ಲೆಯ ಬದನವಾಳು ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಹಾತ್ಮ ಗಾಂಧಿಯವರು 1927 ಮತ್ತು 1932ರಲ್ಲಿ ಎರಡು ಬಾರಿ ಖಾದಿ ಉತ್ಪಾದನಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕಾಂಗ್ರೆಸ್ ರಾಜ್ಯ ಘಟಕವು ತನ್ನ ಸದಸ್ಯರನ್ನು ಹುರಿದುಂಬಿಸಲು ಮತ್ತು ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಸಾರ್ವಜನಿಕರಲ್ಲಿ ಬೆಂಬಲವನ್ನು ಸಂಗ್ರಹಿಸಲು ಈ ಯಾತ್ರೆಯನ್ನು ಸಂಪೂರ್ಣ ಬಳಕೆ ಮಾಡಲು ಎದುರು ನೋಡುತ್ತಿದ್ದು, ಯಾತ್ರೆಯನ್ನು ಸ್ವಾಗತಿಸಲು ಸಜ್ಜಾಗಿ ನಿಂತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು