8:03 PM Monday26 - January 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ

ಇತ್ತೀಚಿನ ಸುದ್ದಿ

ಕಿನ್ನರಿ ಕಿಂಡರ್‌ಗಾರ್ಟನ್ ಮಕ್ಕಳ ಜತೆ ವಾಯ್ಸ್ ಆಫ್ ಆರಾಧನಾ ನಿರ್ದೇಶಕಿ ಪದ್ಮಶ್ರೀ ಹುಟ್ಟುಹಬ್ಬ

30/09/2022, 11:46

ಮಂಗಳೂರು(reporterkarnataka.com): ವಾಯ್ಸ್ ಆಫ್ ಆರಾಧನಾದ ನಿರ್ದೇಶಕಿ ಹಾಗೂ ಆರದಿರಲಿ ಬದುಕು ಆರಾಧನಾ ತಂಡದ ಪ್ರವರ್ತಕಿ ಪದ್ಮಶ್ರೀ ನಿಡ್ಡೋಡಿ ಅವರ ಹುಟ್ಟುಹಬ್ಬ ನಗರದ ದೇರೆಬೈಲ್ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಟೌನ್ ಶಿಪ್ ನ ಕಿನ್ನರಿ ಕಿಂಡರ್‌ಗಾರ್ಟನ್ ನ ಮಕ್ಕಳ ಜತೆ ಆಚರಿಸಲಾಯಿತು. ಕಿಂಡರ್‌ಗಾರ್ಟನ್ ನ ಸಹಾಯಕ ಶಿಕ್ಷಕಿ ಸುಜಾತಾ ಅವರಿಗೆ ಈ ಸಂದರ್ಭದಲ್ಲಿ ಜಿನಸಿ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಲಾಯಿತು.


ಹುಟ್ಟುಹಬ್ಬದ ಅಂಗವಾಗಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಸಂಗೀತ ರಸಮಂಜರಿ ನಡೆಯಿತು. ಗಣಪತಿ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. p
ಕಿನ್ನರಿ ಕಿಂಡರ್‌ಗಾರ್ಟನ್ ಪರವಾಗಿ ಮೊದಲು ಪದ್ಮಶ್ರೀ ಅವರ ಹುಟ್ಟುಹಬ್ಬದ ಕೇಕ್ ಕಟ್ ಮಾಡಲಾಯಿತು. ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ವಾಯ್ಸ್ ಆಫ್ ಆರಾಧನಾ00l ತಂಡದಿಂದ ಕೇಕ್ ಕಟ್ ಮಾಡಲಾಯಿತು.

ಬಾಲ ಪ್ರತಿಭೆಗಳಾದ ಅಶ್ಮಿತ್ ಎ.ಜೆ., ಅನನ್ಯ ನಾರಾಯಣ. ಯಶಸ್ ಭಟ್ ಮೊದಲಾದವರಿಂದ ಸಂಗೀತ ಸುಧೆ ಹರಿಯಿತು. ವಾಯ್ಸ್ ಆಫ್ ಆರಾಧನಾ ತಂಡದ ಅಭಿಷೇಕ್ ಶೆಟ್ಟಿ ಐಕಳ, ದೀನ್ ರಾಜ್,  ಕೆ. ದೇವಿಪ್ರಸಾದ್, ಬಸವರಾಜ್ ಮಂತ್ರಿ, ಜಯರಾಮ್,  ಜ್ಯೋತ್ಸ್ನಾ, ಆಶಾ, ಪ್ರಸಾದ್, ಕಿನ್ನರಿ ಕಿಂಡರ್‌ಗಾರ್ಟನ್ ನಿರ್ದೇಶಕಿ ಲತಾ ಎ. ಕಲ್ಲಡ್ಕ ಮುಂತಾದವರು ಉಪಸ್ಥಿತರಿದ್ದರು. ಜ್ಯೋತ್ಸ್ನಾ ಕಾರ್ಯಕ್ರಮ ನಿರೂಪಿದರು.

ಇತ್ತೀಚಿನ ಸುದ್ದಿ

ಜಾಹೀರಾತು