8:38 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಅ. 3ರಂದು ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಂಗಳಾದೇವಿ ಸರ್ಕಲ್ ಉದ್ಘಾಟನೆ: ಶಾಸಕ ವೇದವ್ಯಾಸ ಕಾಮತ್

30/09/2022, 21:12

ಮಂಗಳೂರು(reporterkarnataka.com): ನಗರದ ಪ್ರಮುಖ ಭಾಗಗಳಲ್ಲಿ ನಿರ್ಮಾಣವಾದ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಹಾಗೂ ಮಂಗಳಾದೇವಿ ಸರ್ಕಲ್ ಸೋಮವಾರ ಉದ್ಘಾಟನೆಯಾಗಲಿದೆ ಎಂದು ಶಾಸಕ ವೇದವ್ಯಾಸ್ ಕಾಮತ್  ತಿಳಿಸಿದ್ದಾರೆ.

ಈ ವಿಚಾರದಲ್ಲಿ ಮಾತನಾಡಿರುವ‌ ಶಾಸಕ ಕಾಮತ್, ಅಕ್ಟೋಬರ್ 3ನೇ ತಾರೀಕು ಸಂಜೆ 6 ಗಂಟೆಗೆ ಲೇಡಿಹಿಲ್ ಶಾಲೆಯ ಬಳಿ ನಿರ್ಮಾಣಗೊಂಡ ನೂತನ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಹಕಾರದಲ್ಲಿ ನಿರ್ಮಾಣಗೊಂಡ ಸರ್ಕಲ್ ಹಿರಿಯರ ಹಾಗೂ ಪ್ರಮುಖರ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಹೇಳಿದ್ದಾರೆ.

ಅದೇ ದಿನ ಸಂಜೆ 7 ಗಂಟೆಗೆ ಮಂಗಳಾದೇವಿ ಸರ್ಕಲ್ ಲೋಕಾರ್ಪಣೆಗೊಳ್ಳಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಶಾಸಕ ಕಾಮತ್ ಆಮಂತ್ರಿಸಿದ್ದಾರೆ. ಮಂಗಳಾದೇವಿ ವೃತ್ತವನ್ನು ಅತೀ ಸುಂದರವಾಗಿ ನಿರ್ಮಾಣ ಮಾಡಲಾಗಿದೆ. ಈ ವೃತ್ತದಲ್ಲಿ 3 ತಾಮ್ರದ ಸಿಂಹಗಳನ್ನು ಸ್ಥಾಪಿಸಲಾಗಿದೆ. ದೇವಿಯ ವಾಹನದ ಸೂಚಕವಾಗಿ ಸಿಂಹಗಳ ಚಿತ್ರಣವನ್ನು ನೀಡಲಾಗಿದೆ ಎಂದು‌ ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು