9:38 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಮಾಜಿ ಸಂಸದ ವೆಂಕಟೇಶ್ ನಾಯಕ್ ಹುಟ್ಟುಹಬ್ಬ ಪ್ರಯುಕ್ತ ಕೊರೊನಾ ವಾರಿಯರ್ಸ್ ಗೆ ಆಹಾರ ಪದಾರ್ಥ ವಿತರಣೆ

29/06/2021, 00:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ದೇವದುರ್ಗ ಅರಕೆರೆಯ ಹಿರಿಯ ರಾಜಕಾರಣಿ,

ಶ್ರೀದೇವಿ ಆರ್. ನಾಯಕ್ ಅವರ ತಾತ ಎ. ವೆಂಕಟೇಶ್ ನಾಯಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಸುಮಾರು 100 ಮಂದಿ ಕೊರೊನಾ ವಾರಿಯರ್ಸಗಳಿಗೆ 25 ಕೆಜಿ ಅಕ್ಕಿ ಹಾಗೂ ಆಹಾರ ಪದಾರ್ಥಗಳು ಮತ್ತು ತರಕಾರಿಯನ್ನು ಕೆಪಿಸಿಸಿ ರಾಜ್ಯ ಮಹಿಳಾ ಮಹಿಳಾ ಕಾರ್ಯದರ್ಶಿ ಶ್ರೀದೇವಿ ನಾಯಕ್ ವಿತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ತಾತನವರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ವರ್ಷ ಈ ಕಾರ್ಯಕ್ರಮದಲ್ಲಿ ಬಡವರು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಾಗುತ್ತದೆ. ಅವರಿಗೆ ಒಳ್ಳೆಯದಾದರೆ ನಮಗೂ ಒಳ್ಳೆಯ ಆಗುತ್ತೆ ಎನ್ನುವ ನಿಟ್ಟಿನಲ್ಲಿ  ಕಾರ್ಯಕ್ರಮದ ಕಾರ್ಯಗಳ ನೆರವೇರಿಸುವ ಮೂಲಕ ಹಿರಿಯ ರಾಜಕಾರಣಿ ಎ. ವೆಂಕಟೇಶ್ ನಾಯಕ್ ಅವರನ್ನು ನಾವು ಸ್ಮರಿಸುತ್ತೇವೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದೇವೆ ಎಂದು ಹೇಳಿದರು.

ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅರಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಕಾಂಗ್ರೇಸಿನ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣದ ಅಧ್ಯಕ್ಷರುಗಳು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿಗಳ ಬಳಗದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು