12:13 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮಾಜಿ ಸಂಸದ ವೆಂಕಟೇಶ್ ನಾಯಕ್ ಹುಟ್ಟುಹಬ್ಬ ಪ್ರಯುಕ್ತ ಕೊರೊನಾ ವಾರಿಯರ್ಸ್ ಗೆ ಆಹಾರ ಪದಾರ್ಥ ವಿತರಣೆ

29/06/2021, 00:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ದೇವದುರ್ಗ ಅರಕೆರೆಯ ಹಿರಿಯ ರಾಜಕಾರಣಿ,

ಶ್ರೀದೇವಿ ಆರ್. ನಾಯಕ್ ಅವರ ತಾತ ಎ. ವೆಂಕಟೇಶ್ ನಾಯಕ್ ಅವರ ಹುಟ್ಟುಹಬ್ಬದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ಸುಮಾರು 100 ಮಂದಿ ಕೊರೊನಾ ವಾರಿಯರ್ಸಗಳಿಗೆ 25 ಕೆಜಿ ಅಕ್ಕಿ ಹಾಗೂ ಆಹಾರ ಪದಾರ್ಥಗಳು ಮತ್ತು ತರಕಾರಿಯನ್ನು ಕೆಪಿಸಿಸಿ ರಾಜ್ಯ ಮಹಿಳಾ ಮಹಿಳಾ ಕಾರ್ಯದರ್ಶಿ ಶ್ರೀದೇವಿ ನಾಯಕ್ ವಿತರಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿವರ್ಷ ತಾತನವರ ಹುಟ್ಟುಹಬ್ಬದ ಕಾರ್ಯಕ್ರಮ ನಡೆಸಲಾಗುತ್ತಿದೆ. ಪ್ರತಿ ವರ್ಷ ಈ ಕಾರ್ಯಕ್ರಮದಲ್ಲಿ ಬಡವರು, ಕಷ್ಟದಲ್ಲಿರುವವರಿಗೆ ಸಹಾಯ ಮಾಡಲಾಗುತ್ತದೆ. ಅವರಿಗೆ ಒಳ್ಳೆಯದಾದರೆ ನಮಗೂ ಒಳ್ಳೆಯ ಆಗುತ್ತೆ ಎನ್ನುವ ನಿಟ್ಟಿನಲ್ಲಿ  ಕಾರ್ಯಕ್ರಮದ ಕಾರ್ಯಗಳ ನೆರವೇರಿಸುವ ಮೂಲಕ ಹಿರಿಯ ರಾಜಕಾರಣಿ ಎ. ವೆಂಕಟೇಶ್ ನಾಯಕ್ ಅವರನ್ನು ನಾವು ಸ್ಮರಿಸುತ್ತೇವೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದೇವೆ ಎಂದು ಹೇಳಿದರು.

ದೇವದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅರಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪುರಸಭೆ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು,  ಕಾಂಗ್ರೇಸಿನ ಹಿರಿಯ ಮುಖಂಡರು, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾಮಾಜಿಕ ಜಾಲತಾಣದ ಅಧ್ಯಕ್ಷರುಗಳು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿಗಳ ಬಳಗದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು