6:14 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭಾರತ್ ಜೋಡೋ ಯಾತ್ರೆ ಕರ್ನಾಟಕಕ್ಕೆ ಪ್ರವೇಶ:  ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿಗೆ ಭಾರಿ ಸ್ವಾಗತ

01/10/2022, 01:01

ಚಾಮರಾಜನಗರ(reporterkarnataka.com): ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುಕ್ರವಾರ ಮುಂಜಾನೆ ಕರ್ನಾಟಕವನ್ನು ಪ್ರವೇಶಿಸಿತು. ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಾದಯಾತ್ರೆಗೆ ಅರಣ್ಯ ಇಲಾಖೆ ಅನುಮತಿ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ತಮಿಳುನಾಡಿನ ಗುಡಲೂರಿನಿಂದ ಕರ್ನಾಟಕದ ಗುಂಡ್ಲುಪೇಟೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಹನದಲ್ಲಿ ಬಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಹುಲ್​ ಗಾಂಧಿ ಅವರಿಗೆ ಸ್ವಾಗತಿಸಲಾಯಿತು.

ಕಾಂಗ್ರೆಸ್ ನಾಯಕರಿಗೆ ಅರಣ್ಯ ಇಲಾಖೆಯು ಕಾರಿನಲ್ಲಿ ತೆರಳಲು ಅವಕಾಶ ನೀಡಿತ್ತು. ರಾಹುಲ್​ ಗಾಂಧಿ ಮತ್ತು ಸಿದ್ದರಾಮಯ್ಯ ಒಂದೇ ಕಾರಿನಲ್ಲಿ ಗುಂಡ್ಲುಪೇಟೆಗೆ ಬಂದರು.

ರಾಹುಲ್ ಗಾಂಧಿ ಅವರನ್ನು ಕೆಕ್ಕೆನಹಳ್ಳಿಯ ಕರ್ನಾಟಕ ಗಡಿಯಲ್ಲೇ ಸಿದ್ದರಾಮಯ್ಯ ತಮ್ಮ ಬೆಂಬಲಿಗರೊಂದಿಗೆ ಸ್ವಾಗತಿಸಿದರು. ಈ ವೇಳೆ ಮಹದೇವಪ್ಪ, ಜಾರ್ಜ್, ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು. ಮತ್ತೊಂದೆಡೆ ರಾಹುಲ್ ಗಾಂಧಿ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೇದಿಕೆಯ ಬಳಿಯೇ ಕಾಯುತ್ತಿದ್ದರು. ಗುಂಡ್ಲುಪೇಟೆಯಿಂದ ಕೆಕ್ಕೇನಹಳ್ಳಿ ಸುಮಾರು 25 ಕಿಮೀ ದೂರವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು