5:36 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಭೂತಾನ್ ನಿಂದ 17 ಸಾವಿರ ಟನ್  ಅಡಕೆ ಆಮದು: ರೈತರಲ್ಲಿ ಆತಂಕ ಬೇಡವೆಂದ ಗೃಹ ಸಚಿವರು

01/10/2022, 01:21

ಬೆಂಗಳೂರು(reporterkarnataka.com): ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. 

ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ. ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು