3:26 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಹರೇಕಳ ಸೇತುವೆ ಸಾರ್ವಜನಿಕ ಸಂಚಾರಕ್ಕೆ  ಮುಕ್ತಗೊಳಿಸಿ: ಡಿವೈಎಫ್ಐ ಒತ್ತಾಯ 

01/10/2022, 13:46

ಮಂಗಳೂರು(reporterkarnataka.com): ಅಡ್ಯಾರ್ ಮತ್ತು ಹರೇಕಳ ಸಂಪರ್ಕ ಮಾಡುವ ಸಲುವಾಗಿ ಹರೇಕಳ ಗ್ರಾಮ ವ್ಯಾಪ್ತಿಗೆ ಬರುವ ನೇತ್ರಾವತಿ ನದಿಯಲ್ಲಿ ನಿರ್ಮಿಸಲಾಗಿರುವ ಕಿಂಡಿ ಆಣೆಕಟ್ಟು ಮತ್ತು ಸೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸೇತುವೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ. 

ಸೇತುವೆಯನ್ನು ಸಂಪರ್ಕಿಸುವಲ್ಲಿ ರಸ್ತೆ ಕಾಮಗಾರಿ ಸಮರ್ಪಕವಾಗಿ ಮಾಡದೇ ಇರುವುದರಿಂದ ನಾಗರಿಕರಿಗೆ ತೀವ್ರ ತೊಂದರೆ ಆಗುತ್ತಿದೆ. ಆಣೆಕಟ್ಟು ನಿರ್ಮಾಣದ ನಂತರ ಸಂಚಾರಿ ದೋಣಿ ನಿರ್ವಾಹಕರು ದೋಣಿ ಸೇವೆಯನ್ನು ಸ್ಥಗಿತಗೊಳಿಸಿದ್ದಾರೆ ಇದರಿಂದಾಗಿ ದಿನನಿತ್ಯ ನಗರಕ್ಕೆ ಬಂದು ಹೋಗುವ ಸಾರ್ವಜನಿಕರಿಗೆ ನದಿ ಆಚೆಗಿನ ಪ್ರಯಾಣಕ್ಕೆ ಸಮಸ್ಯೆ ಉಂಟಾಗಿದೆ. ಸೇತುವೆ ಮೇಲೆ ನಾಗರಿಕರಿಗೆ ನಡೆದಾಡಲು ಸಂಜೆ 7ರ ನಂತರ ಮುಂಜಾನೆ 6 ಗಂಟೆಯ ತನಕ ನಿರ್ಬಂಧ ಹೇರಿ ಸೇತುವೆಯ ಕಾಮಗಾರಿ ಪೂರ್ಣಗೊಂಡರೂ ಎರಡು ಬದಿಗಳಲ್ಲಿ ಗೇಟುಗಳನ್ನು ಮುಚ್ಚಿರುವ ಸಣ್ಣ ನೀರಾವರಿ ಇಲಾಖೆಯ ತೀರ್ಮಾನದಿಂದಾಗಿ ಸಾರ್ವಜನಿಕರಿಗೆ ಬಹಳ ತೊಂದರೆ ಅನುಭವಿಸುವಂತಾಗಿದೆ. ಸಂಜೆ 7ರ ನಂತರ ಬರುವ ನಾಗರಿಕರು ಬೇಲಿ ಹಾರಿ ಬರುವ ಪರಿಸ್ಥಿತಿ ಇದ್ದು ಇದರಿಂದ ನಾಗರಿಕರ ಜೀವಕ್ಕೆ ಹಾನಿ ಆಗುವ ಸಾಧ್ಯತೆ ಇದ್ದು ಕೂಡಲೇ ಸಾರ್ವಜನಿಕರಿಗೆ 24 ಗಂಟೆ ಮುಕ್ತ ಓಡಾಟಕ್ಕೆ ಅವಕಾಶ ಕೊಡಬೇಕಾಗಿ ಡಿವೈಎಫ್ಐ ಒತ್ತಾಯಿಸಿದೆ.

ಲಘು ವಾಹನಗಳ ಮುಕ್ತ ಸಂಚಾರಕ್ಕೆ ಅನುಕೂಲ ಆಗುವಂತೆ ತ್ವರಿತವಾಗಿ ರಸ್ತೆ ಕಾಮಗಾರಿ ಪೂರ್ಣ ಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಾಗಿ ಡಿವೈಎಫ್ಐ ನಾಯಕರ ನಿಯೋಗವು ಜಲಸಂಪನ್ಮೂಲ ಇಲಾಖೆಯ ಸಣ್ಣ ನೀರಾವರಿ ಮತ್ತು ಅಂತರ್ಜಲ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಿ ಮುಂದಿನ 15 ದಿನದ ಒಳಗಾಗಿ ಸಾರ್ವಜನಿಕರಿಗೆ ಮುಕ್ತವಾಗಿ ನಡೆದಾಡಲು ಅವಕಾಶ ಮಾಡಿಕೊಡಲು ಅಸಾಧ್ಯವಾದಲ್ಲಿ ಸಾರ್ವಜನಿಕರನ್ನು ಸಂಘಟಿಸಿ  ಹೋರಾಟವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಎಚ್ಚರಿಕೆ ನೀಡಿದೆ. ಡಿವೈಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಝ್, ಉಳ್ಳಾಲ ವಲಯ ಅಧ್ಯಕ್ಷ ರಫೀಕ್ ಹರೇಕಳ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ  ಅಶ್ರಫ್ ಹರೇಕಳ, ಹರೇಕಳ ಗ್ರಾಮ ಸಮಿತಿ ಕಾರ್ಯದರ್ಶಿ ರಿಜ್ವಾನ್ ಖಂಡಿಗೆ ಉಪಸ್ಥಿತರಿದ್ದರು ಎಂದು ಡಿವೈಎಫ್ಐ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು