3:00 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು!

01/10/2022, 14:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ‌ ಪಡುವಂತಾಗಿದೆ.


ತೆಲಸಂಗ ಗ್ರಾಮದಲ್ಲಿ ದೋಣಿ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ತೋಟದ ಕೆಲಸಕ್ಕೆ ಹೋದ ರೈತರು ಹಗ್ಗ ಹಿಡಿದು ಬರುವಂತಾಗಿದೆ.

ಶಾಸಕರ ಹುಟ್ಟೂರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ನಿನ್ನೆ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಮತ್ತೆ ಸ್ಥಳೀಯ ರೈತರು ಸಂಕಷ್ಟ ಪಡುವಂತಾಗಿದ್ದು ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಆಗ್ರಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು