9:59 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು!

01/10/2022, 14:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ‌ ಪಡುವಂತಾಗಿದೆ.


ತೆಲಸಂಗ ಗ್ರಾಮದಲ್ಲಿ ದೋಣಿ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ತೋಟದ ಕೆಲಸಕ್ಕೆ ಹೋದ ರೈತರು ಹಗ್ಗ ಹಿಡಿದು ಬರುವಂತಾಗಿದೆ.

ಶಾಸಕರ ಹುಟ್ಟೂರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ನಿನ್ನೆ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಮತ್ತೆ ಸ್ಥಳೀಯ ರೈತರು ಸಂಕಷ್ಟ ಪಡುವಂತಾಗಿದ್ದು ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಆಗ್ರಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು