3:53 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು!

01/10/2022, 14:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ‌ ಪಡುವಂತಾಗಿದೆ.


ತೆಲಸಂಗ ಗ್ರಾಮದಲ್ಲಿ ದೋಣಿ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ತೋಟದ ಕೆಲಸಕ್ಕೆ ಹೋದ ರೈತರು ಹಗ್ಗ ಹಿಡಿದು ಬರುವಂತಾಗಿದೆ.

ಶಾಸಕರ ಹುಟ್ಟೂರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ನಿನ್ನೆ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಮತ್ತೆ ಸ್ಥಳೀಯ ರೈತರು ಸಂಕಷ್ಟ ಪಡುವಂತಾಗಿದ್ದು ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಆಗ್ರಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು