8:17 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ  ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

01/10/2022, 18:40

ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ

ಡಾ.ಭರತ್ ಶೆಟ್ಟಿ ವೈ. ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ 6 ಗ್ರಾಮಗಳಿಗೆ ಪೈಪ್ ಲೈನ್ ಹಾಕುವ ಯೋಜನೆ, ಸಮೀಪದಲ್ಲಿ ಬೋರ್ ವೆಲ್ ತೋಡುವ ಮೂಲಕ ನೀರಿನ ಸಂಪರ್ಕ ನೀಡಲಾಗುವುದು. ನೀರಿನ ಮೂಲ ನಿರಂತರವಾಗಿ ಇರುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 140 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ, ಮೂಡಬಿದ್ರೆ, ಬಂಟ್ವಾಳ, ಮಂಗಳೂರು,ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 41 ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಇದಾಗಿದೆ.

ಪಂಚಾಯತ್ ನೀರಿನ ಸಂಪರ್ಕ ನೀಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಪಿಡಿಒ ಜೀನತ್ ಅಡ್ಯಾರ್, ದಮಯಂತಿ ನೀರುಮಾರ್ಗ, ಮನಪಾ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್ಸ್, ಇಸ್ಮಾಯಿಲ್ ಮಲ್ಲೂರು, ರತ್ನಾ ಸುರೇಶ್, ಉಳಾಯಿಬೆಟ್ಟು ಪಿಡಿಒ ಅನಿತಾ ವಿ.ಕ್ಯಾತರಿನ್,ಪಿಡಿಒ ರಾಜೇಂದ್ರ, ನರೇಂದ್ರ ಬಾಬು, ನೀರು ಸರಬರಾಜಿನ ಎಂಜಿನಿಯರ್, ಜಿ ಕೆ ನಾಯಕ್ ನರೇಂದ್ರ,  ಜಗದೀಶ್ ಎಂಜಿನಿಯರ್ ಸುಧಾಕರ ಶೆಟ್ಟಿ, ಕಿಶೋರ್,ರಾಜೇಶ್ ಶೆಟ್ಟಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು