7:48 AM Monday2 - February 2026
ಬ್ರೇಕಿಂಗ್ ನ್ಯೂಸ್
ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇಂದ್ರಿಯ ನಿಗ್ರಹಿಸುವುದೇ ನೈಜ ಜ್ಞಾನ; ಇದುವೇ ಜೀವನ ಮಾರ್ಗ : ಶೃಂಗೇರಿ ಶಾರದಾಪೀಠದ… ಗೃಹ ಸಚಿವರ ರಾಜೀನಾಮೆ, ಪೊಲೀಸ್ ಕಮೀಷನರ್ ಅಮಾನತಿಗೆ ಬಿಜೆಪಿ ಆಗ್ರಹ ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್…

ಇತ್ತೀಚಿನ ಸುದ್ದಿ

26.58 ಕೋಟಿ ರೂ.ವೆಚ್ಚದಲ್ಲಿ 6 ಗ್ರಾಮಗಳಿಗೆ  ಬಹು ಗ್ರಾಮ ಕುಡಿಯುವ ನೀರಿನ ಯೋಜನೆ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿ ಪೂಜೆ

01/10/2022, 18:40

ಮಂಗಳೂರು(reporterkarnataka.com):ಸರಕಾರದ ಜಲಜೀವನ್ ಮಿಷನ್ ವತಿಯಿಂದ ಅಡ್ಯಾರ್ ,ಅರ್ಕುಳ, ಮಲ್ಲೂರು, ಬೊಂಡಂತಿಲ, ಉಳಾಯಿಬೆಟ್ಟು ಹಾಗೂ ನೀರುಮಾರ್ಗ ಗ್ರಾಮ ಪಂಚಾಯತ್ ಗಳಿಗೆ ಬಹುಗ್ರಾಮ ಶುದ್ದ ಕುಡಿಯುವ ನೀರಿನ ಯೋಜನೆಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ

ಡಾ.ಭರತ್ ಶೆಟ್ಟಿ ವೈ. ಶನಿವಾರ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಜಲಜೀವನ ಮಿಷನ್ ಯೋಜನೆಯಡಿ 6 ಗ್ರಾಮಗಳಿಗೆ ಪೈಪ್ ಲೈನ್ ಹಾಕುವ ಯೋಜನೆ, ಸಮೀಪದಲ್ಲಿ ಬೋರ್ ವೆಲ್ ತೋಡುವ ಮೂಲಕ ನೀರಿನ ಸಂಪರ್ಕ ನೀಡಲಾಗುವುದು. ನೀರಿನ ಮೂಲ ನಿರಂತರವಾಗಿ ಇರುವಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ.

ಒಟ್ಟು 140 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಉತ್ತರ, ಮೂಡಬಿದ್ರೆ, ಬಂಟ್ವಾಳ, ಮಂಗಳೂರು,ಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾಡುವ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದರು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 41 ಸಾವಿರ ಮನೆಗಳಿಗೆ ನೀರಿನ ಸಂಪರ್ಕ ಇದಾಗಿದೆ.

ಪಂಚಾಯತ್ ನೀರಿನ ಸಂಪರ್ಕ ನೀಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.


ವೇದಿಕೆಯಲ್ಲಿ ಪಿಡಿಒ ಜೀನತ್ ಅಡ್ಯಾರ್, ದಮಯಂತಿ ನೀರುಮಾರ್ಗ, ಮನಪಾ ಸದಸ್ಯರಾದ ಹೇಮಲತಾ ರಘು ಸಾಲ್ಯಾನ್ಸ್, ಇಸ್ಮಾಯಿಲ್ ಮಲ್ಲೂರು, ರತ್ನಾ ಸುರೇಶ್, ಉಳಾಯಿಬೆಟ್ಟು ಪಿಡಿಒ ಅನಿತಾ ವಿ.ಕ್ಯಾತರಿನ್,ಪಿಡಿಒ ರಾಜೇಂದ್ರ, ನರೇಂದ್ರ ಬಾಬು, ನೀರು ಸರಬರಾಜಿನ ಎಂಜಿನಿಯರ್, ಜಿ ಕೆ ನಾಯಕ್ ನರೇಂದ್ರ,  ಜಗದೀಶ್ ಎಂಜಿನಿಯರ್ ಸುಧಾಕರ ಶೆಟ್ಟಿ, ಕಿಶೋರ್,ರಾಜೇಶ್ ಶೆಟ್ಟಿ‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು