1:36 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು