3:24 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು