11:21 PM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು