8:21 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಮೈಸೂರು ದಸರಾ ಪ್ರಧಾನ ಕವಿಗೋಷ್ಠಿ: ಮಂಗಳೂರಿನ ಮಹೇಶ್ ಆರ್. ನಾಯಕ್ ಆಯ್ಕೆ

02/10/2022, 13:07

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ ಕವಿಗೋಷ್ಠಿಗೆ ಮಂಗಳೂರಿನ ಕವಿ, ಸಾಹಿತಿ ಮಹೇಶ ಆರ್. ನಾಯಕ್ ಆಯ್ಕೆಯಾಗಿದ್ದಾರೆ.

ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಉದ್ಘಾಟಿಸಲಿರುವ ಈ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಸುಪ್ರಸಿದ್ಧ ಹಿರಿಯ ಕವಿ ಡಾ. ಎಚ್. ಎಸ್. ಶಿವಪ್ರಕಾಶರವರು ವಹಿಸಲಿದ್ದಾರೆ. ಕಳೆದ ಮೂರು ದಶಕಗಳಿಂದ ಕನ್ನಡ ಮತ್ತು ಕೊಂಕಣಿ ಭಾಷೆಯ ಸಾಹಿತ್ಯ ರಚನೆಯಲ್ಲಿ ಸಕ್ರಿಯವಾಗಿರುವ ಮಹೇಶ ಆರ್. ನಾಯಕ್ ಅವರು ‘ಕಲ್ಲಚ್ಚು ಪ್ರಕಾಶನದ’ ಮುಖ್ಯಸ್ಥರಾಗಿದ್ದು, ಈವರೆಗೆ 80ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ಪ್ರಕಟಿಸಿದ್ದಾರೆ ಮತ್ತು ಅಮೆರಿಕದ ‘ಅಕ್ಕ’  ವಿಶ್ವ ಕನ್ನಡ ಸಮ್ಮೇಳನ, ಸಿಂಗಾಪುರ ಬರಹಗಾರರ ಹಬ್ಬ, ಕೆನಡಾದ ಟೊರೆಂಟೂ ಅಂತರರಾಷ್ಟ್ರೀಯ ಸಿನಿಮಾ ಹಬ್ಬ, ಹಾಂಕ್ ಕಾಂಗ್ ಸಾಹಿತ್ಯ ಹಬ್ಬ, ದಕ್ಷಿಣ ಆಫ್ರಿಕಾ ಮತ್ತು ಮಾರಿಷಸ್ ನಲ್ಲಿ ಜರುಗಿದ ವಿಶ್ವ ಹಿಂದಿ ಸಮ್ಮೇಳನ, ಜರ್ಮನಿಯ ಫ್ರಾಂಕ್ ಫಾರ್ಟ್ ಪುಸ್ತಕ ಹಬ್ಬ, ಭೂತಾನ್ ಲಿಟರೇಚರ್ ಫೆಸ್ಟಿವಲ್,  ದುಬೈ ಲಿಟ್ ಫೆಸ್ಟ್, ಶ್ರೀಲಂಕಾ ಲಿಟ್ ಫೆಸ್ಟ್, ಜೈಪುರ ಲಿಟ್ ಫೆಸ್ಟ್, ವಿಶ್ವ ಕೊಂಕಣಿ ಅಧಿವೇಶನ ಸೇರಿದಂತೆ ರಾಷ್ಟ್ರೀಯ ಅಂತರರಾಷ್ಟ್ರೀಯವಾಗಿ ನೂರಾರು ಸಾಹಿತ್ಯಪರ ಕಾರ್ಯಕ್ರಮಗಳಲ್ಲಿ ವಿವಿಧ ನೆಲೆಗಳಲ್ಲಿ ಭಾಗಿಯಾಗಿದ್ದು ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು