1:28 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯುತ್ತಿದ್ದರು: ಸಿ.ಟಿ. ರವಿ ವ್ಯಂಗ್ಯ

02/10/2022, 15:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಅವರಿಗೆ ಬೈ ಬರ್ತ್ ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಹಾಕಿದ ಬಗ್ಗೆ ಮಾಧ್ಯಮ ಜತೆ ಪ್ರಸ್ತಾಪಿಸಿದ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.

ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ.ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಅವರು ನುಡಿದರು.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು