3:24 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯುತ್ತಿದ್ದರು: ಸಿ.ಟಿ. ರವಿ ವ್ಯಂಗ್ಯ

02/10/2022, 15:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಅವರಿಗೆ ಬೈ ಬರ್ತ್ ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಹಾಕಿದ ಬಗ್ಗೆ ಮಾಧ್ಯಮ ಜತೆ ಪ್ರಸ್ತಾಪಿಸಿದ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.

ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ.ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಅವರು ನುಡಿದರು.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು