3:40 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯುತ್ತಿದ್ದರು: ಸಿ.ಟಿ. ರವಿ ವ್ಯಂಗ್ಯ

02/10/2022, 15:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಅವರಿಗೆ ಬೈ ಬರ್ತ್ ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಹಾಕಿದ ಬಗ್ಗೆ ಮಾಧ್ಯಮ ಜತೆ ಪ್ರಸ್ತಾಪಿಸಿದ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.

ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ.ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಅವರು ನುಡಿದರು.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು