1:36 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ದೇಶ ವಿಭಜನೆಗೆ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ: ಸಿ.ಟಿ. ರವಿ

02/10/2022, 18:07

ಸಂತೋಷ್ ಅತ್ತಿಕೆರೆ ಚಿಕ್ಕಮಂಗಳೂರು

info.reporterkarnataka@gmail.com

ಭಾರತವನ್ನ ತುಂಡರಿಸುವಾಗ ಸಹಿ ಹಾಕಿದ್ದು ಕಾಂಗ್ರೆಸ್ ಹೊರತು ಬಿಜೆಪಿಯಲ್ಲ. ಕೋಟ್ಯಂತರ ಜೀವವನ್ನ ಮತಾಂಧರ ಕೈಗೆ ಕೊಟ್ಟದ್ದು ಕಾಂಗ್ರೆಸ್. ದೇಶ ವಿಭಜನೆಯ ಬಗ್ಗೆ  ಕಾಂಗ್ರೆಸ್ಸಿಗೆ ಪಶ್ಚಾತ್ತಾಪ ಇದೆಯೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರಶ್ನಿಸಿದರು.

ಮಾಧ್ಯಮ ಜತೆ ಭಾನುವಾರ ಮಾತನಾಡಿದ ಅವರು,ಮಹಿಳೆಯರು ಮಾನ-ಪ್ರಾಣ ಉಳಿಸಿಕೊಳ್ಳಲಾಗದೆ ಸಾಯಬೇಕಾಯ್ತು. ಇಂತಹಾ ವಿಭಜಿತ ಭಾರತವನ್ನ ಸ್ವಾತಂತ್ರ್ಯ ಹೋರಾಟಗಾರರು ನಿರೀಕ್ಷಿಸಿರಲಿಲ್ಲ ಎಂದರು.

ತುರ್ತು ಪರಿಸ್ಥಿತಿ ಹೇರಿಕೆ ನಮ್ಮಿಂದಾದ ಅಪರಾಧ ಅಂತ ವರ್ಷಗಳ ಬಳಿಕ ಕಾಂಗ್ರೆಸ್ ಪಶ್ಚಾತ್ತಾಪಪಟ್ಟಿತು. ಭಾರತ ವಿಭಜನೆಗೆ ಸಹಿ ಹಾಕಿದ್ದು ಅಪರಾಧ ಅಂತ ಕಾಂಗ್ರೆಸ್ಸಿಗೆ ಅನ್ನಿಸುತ್ತಾ 

ಎಂಬ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಾದಯಾತ್ರೆ ಮುಂದುವರೆಸಲಿ, ಆಗ ಅದಕ್ಕೊಂದು ಅರ್ಥವಿರುತ್ತದೆ. ಕಾಂಗ್ರೆಸ್ ನಿರ್ಬಲವಾಗುತ್ತಿದೆ, ಅದಕ್ಕೆ ರಾಹುಲ್ ಗಾಂಧಿಗೆ ಬಲ ತುಂಬಲು ಹೊರಟಿದ್ದಾರೆ  ಎಂದು ಅವರು ಲೇವಡಿ ಮಾಡಿದರು.

ಪ್ರಿಯಾಂಕ ವಾಡ್ರಾ ಅವರೇ ನೇತೃತ್ವ ವಹಿಸಿದ್ರು 387 ಸ್ಥಾನದಲ್ಲಿ ಡೆಪಾಜಿಟ್ ಹೊಯ್ತು. ನೀತಿ, ನಿಯತ್ತು, ನೇತೃತ್ವ ಇಲ್ಲದ ಕಡೆ ಬಲ ಸಿಗಲ್ಲ, ಕಾಂಗ್ರೆಸ್ಸಿಗೆ ಈ ಮೂರು ಇಲ್ಲ ಎಂದು ಸಿ.ಟಿ.ರವಿ ನುಡಿದರು

ಇತ್ತೀಚಿನ ಸುದ್ದಿ

ಜಾಹೀರಾತು