1:27 AM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅಕ್ಟೋಬರ್ 3: ಮಂಗಳೂರಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ, ‘ಬ್ಯಾರಿ ವಚನ ಮಾಲೆ’ ಪುಸ್ತಕ ಬಿಡುಗಡೆ 

02/10/2022, 18:13

ಮಂಗಳೂರು(reporterkarnataka.com):ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಅಕ್ಟೋಬರ್ 3ರಂದು ಮಧ್ಯಾಹ್ನ 3.00 ಗಂಟೆಗೆ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭ ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಡಾ. ಶಿವರಾಮ ಕಾರಂತ ಭವನದಲ್ಲಿ ನಡೆಯಲಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಡಳಿತಾಧಿಕಾರಿ ವಿ.ಎನ್. ಮಲ್ಲಿಕಾರ್ಜುನ ಸ್ವಾಮಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಸ.ಪ.ಪೂ, ಕಾಲೇಜು ಬಿ,ಮೂಡ ಬಂಟ್ವಾಳ ಇಲ್ಲಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅವರು  ಬ್ಯಾರಿ ಭಾಷಾ ದಿನಾಚರಣೆಯ ಉಪನ್ಯಾಸ ನೀಡಲಿದ್ದಾರೆ. ಲೇಖಕ ಹಾಗೂ ಸ್ನೇಹ ಪಬ್ಲಿಕ್ ಸ್ಕೂಲ್ ಬಜಾಲ್ ನ  ಶಿಕ್ಷಕ ಅಶೀರುದ್ದೀನ್ ಆಲಿಯಾ ಅವರು ಬರೆದ “ಬ್ಯಾರಿ ವಚನಮಾಲೆ” ಕೃತಿಯನ್ನು ಪತ್ರಕರ್ತ, ಸಾಹಿತಿ ಹಂಝ ಮಲಾರ್  ಬಿಡುಗಡೆ ಮಾಡಲಿದ್ದಾರೆ. ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಂಯೋಜಕರಾದ ಡಾ. ಅಬೂಬಕ್ಕರ್ ಸಿದ್ದೀಕ್ ಮತ್ತು ಅಕಾಡೆಮಿಯ ಸದಸ್ಯರಾದ ಶಂಶೀರ್ ಬುಡೋಳಿ  ಅವರು ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು