6:31 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ನಿಪ್ಪಾಣಿ: ಸ್ವಚ್ಛ ಭಾರತ, ಸ್ವಸ್ಥ ಭಾರತ’ ಕಾರ್ಯಕ್ರಮ; ಶೌಚಾಲಯ ಸ್ವಚ್ಛ ಮಾಡುವ ವಾಹನಕ್ಕೆ ಚಾಲನೆ 

02/10/2022, 23:57

ಬೆಳಗಾವಿ(reporterkarnataka.com): ನಿಪ್ಪಾಣಿ ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿಯ ಅಂಗವಾಗಿ ಹಮ್ಮಿಕೊಳ್ಳಲಾದ “ಸ್ವಚ್ಛ ಸಂಯುಕ್ತ ಭಾರತ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಜರಾಯಿ, ಹಜ್ ಮತ್ತು ವಕ್ಫ್  ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಂತರ ನಗರಸಭೆ ವತಿಯಿಂದ 15ನೇ ಹಣಕಾಸು ಯೋಜನೆಯಡಿ 31 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ಸ್ವಚ್ಚ ಮಾಡುವ ನೂತನ ವಾಹನಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಇದೇ ವೇಳೆ ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸಿ, ಪ್ರತಿಜ್ಞಾ ವಿಧಿಗೆ ಸಹಿ ಹಾಕಿದರು.


ಮಹಾತ್ಮ ಗಾಂಧೀಜಿ ಅವರ ಆಶಯ ಹಾಗೂ ಪ್ರಧಾನಿ ಮೋದಿಜಿ ಅವರ ಸಂಕಲ್ಪದಂತೆ ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಬರುತ್ತಿದ್ದು, ಇನ್ನು ಮುಂದೆಯೂ ನಗರದ ಸ್ವಚ್ಚತೆಯನ್ನು ಕಾಪಾಡಬೇಕು. ಒಣ ಕಸ, ಹಸಿ ಕಸ ಮತ್ತು ಹಾನಿಕಾರಕ ಕಸಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ, ಕಸ ವಿಲೇವಾರಿ ಕೆಲಸವನ್ನು ಇನ್ನೂ ಸರಳವಾಗಿಸಲು ನೆರವಾಗೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು