4:17 PM Sunday19 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ನಿಪ್ಪಾಣಿ: ಸ್ವಚ್ಛ ಭಾರತ, ಸ್ವಸ್ಥ ಭಾರತ’ ಕಾರ್ಯಕ್ರಮ; ಶೌಚಾಲಯ ಸ್ವಚ್ಛ ಮಾಡುವ ವಾಹನಕ್ಕೆ ಚಾಲನೆ 

02/10/2022, 23:57

ಬೆಳಗಾವಿ(reporterkarnataka.com): ನಿಪ್ಪಾಣಿ ನಗರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿಯ ಅಂಗವಾಗಿ ಹಮ್ಮಿಕೊಳ್ಳಲಾದ “ಸ್ವಚ್ಛ ಸಂಯುಕ್ತ ಭಾರತ” ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಮುಜರಾಯಿ, ಹಜ್ ಮತ್ತು ವಕ್ಫ್  ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ನಂತರ ನಗರಸಭೆ ವತಿಯಿಂದ 15ನೇ ಹಣಕಾಸು ಯೋಜನೆಯಡಿ 31 ಲಕ್ಷ ರೂ. ವೆಚ್ಚದಲ್ಲಿ ಶೌಚಾಲಯ ಸ್ವಚ್ಚ ಮಾಡುವ ನೂತನ ವಾಹನಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಇದೇ ವೇಳೆ ಸ್ವಚ್ಛತೆ ಬಗ್ಗೆ ಜನಜಾಗೃತಿ ಮೂಡಿಸಿ, ಪ್ರತಿಜ್ಞಾ ವಿಧಿಗೆ ಸಹಿ ಹಾಕಿದರು.


ಮಹಾತ್ಮ ಗಾಂಧೀಜಿ ಅವರ ಆಶಯ ಹಾಗೂ ಪ್ರಧಾನಿ ಮೋದಿಜಿ ಅವರ ಸಂಕಲ್ಪದಂತೆ ಸ್ವಚ್ಛ ಭಾರತ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಬರುತ್ತಿದ್ದು, ಇನ್ನು ಮುಂದೆಯೂ ನಗರದ ಸ್ವಚ್ಚತೆಯನ್ನು ಕಾಪಾಡಬೇಕು. ಒಣ ಕಸ, ಹಸಿ ಕಸ ಮತ್ತು ಹಾನಿಕಾರಕ ಕಸಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ, ಕಸ ವಿಲೇವಾರಿ ಕೆಲಸವನ್ನು ಇನ್ನೂ ಸರಳವಾಗಿಸಲು ನೆರವಾಗೋಣ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು