4:45 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಗಾಂಧೀಜಿ ವಿಚಾರಧಾರೆ ಕಡೆಗಣಿಸಿ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯವಿಲ್ಲ: ಬಿ.ಕೆ. ಇಮ್ತಿಯಾಝ್

03/10/2022, 14:28

ಮಂಗಳೂರು(reporterkarnataka.com): ಅಹಿಂಸೆ ಅಥವಾ ಸಂಪೂರ್ಣ ಅಹಿಂಸೆಯ ಮೇಲೆ ದೃಢವಾಗಿ ರೂಪಿಸಲ್ಪಟ್ಟ ಸಾಮೂಹಿಕ ಅವಿಧೇಯತೆಯ ಮೂಲಕ ದಬ್ಬಾಳಿಕೆಗೆ ಪ್ರತಿರೋಧವನ್ನು ಒಡ್ಡುವ ಸತ್ಯಾಗ್ರಹದ ಪರಿಕಲ್ಪನೆಗೆ ಜಗತ್ತಿಗೆ ದಾರಿ ತೋರಿಸಿದವರು. ಮಹಾತ್ಮ ಗಾಂಧೀಜಿಯವರು ಅದೇ ಅಹಿಂಸಾತ್ಮಕ ಹೋರಾಟವೇ ಭಾರತವನ್ನು ಸ್ವಾತಂತ್ರ್ಯದತ್ತ ತಂದು ನಿಲ್ಲಿಸಿತು ಹಾಗೂ ಜಗತ್ತಿನ ವಿವಿಧ ದೇಶಗಳಲ್ಲಿ ನಾಗರಿಕ ಹಕ್ಕುಗಳ ಮತ್ತು ಸ್ವಾತಂತ್ರ್ಯ ಆಂದೋಲನ ಗಳಿಗೆ ಸ್ಫೂರ್ತಿ ನೀಡಿತು ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿಕೆ ಇಮ್ತಿಯಾಝ್ ಹೇಳಿದರು.

ಅವರು ನಗರದ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘದ ಆಶ್ರಯದಲ್ಲಿ ನಡೆದ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯ ವಿಚಾರಗಳನ್ನು ಕಡೆಗಣಿಸಿ ಭಾರತವನ್ನು ಸದೃಢವಾಗಿ ಕಟ್ಟುವುದು ಸಾಧ್ಯವಿಲ್ಲ. ಭಾರತದ ಬಹುತ್ವ ಮತ್ತು ಸಮಾನತೆ,ಏಕತೆಯನ್ನು ಉಳಿಸಲು ಗಾಂಧೀ ತತ್ವ ಅನುಕರಣೀಯ ಎಂದು ಅವರು ಹೇಳಿದರು.

ಸಂಘದ ಉಪಾಧ್ಯಕ್ಷರಾದ ಸಂತೋಷ್ ಆರ್.ಎಸ್. ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಮುಖರಾದ ಅಸೀಫ್ ಬಾವ, ರಿಯಾಜ್, ಆದಂ ಬಜಾಲ್, ಮನ್ಸೂರ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಸ್ವಾಗತಿಸಿ, ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು