6:51 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್

03/10/2022, 16:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಳ್ಳಿ ಗ್ರಾಮದಲ್ಲಿ 21.40 ಕೋಟಿ ವೆಚ್ಚದ ಪಾರ್ಥನಳ್ಳಿ ಹಳೆ ಕಿರಣಗಿ ರಸ್ತೆ , 212 ಲಕ್ಷ ವೆಚ್ಚದ ಪಾರ್ಥನಳ್ಳಿ ಜಾಧವ ತೋಟದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಾಗವಾಡ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದಾಗಿದೆ, ಮೂಲ ಸೌಲಭ್ಯ ಗಳಾದ ರಸ್ತೆ , ಕುಡಿಯುವ ನೀರು , ಚರಂಡಿ, ಶಾಲಾ ಕಟ್ಟಡ, ಶೌಚಾಲಯ, ರೈತರ ಜಮೀನುಗಳಿಗೆ ನೀರಾವರಿ, ಶಿಕ್ಷಕರ ನೇಮಕಾತಿ , ಆಸ್ಪತ್ರೆ ಸೇರಿದಂತೆ ಹಲವಾ ರು ಸೌಲಭ್ಯಗಳು ಜನರಿಗೆ ದೊರೆಯಬೇಕು.

ಇದೇ ಸಂದರ್ಭದಲ್ಲಿ ಜ್ಯೋತಿ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಪಂಚಾಯತ್ ರಾಜ್ಯ ಇಲಾಖೆಯ ಅಭಿಯಂತರ ವೀರಣ್ಣ ವಾಲಿ, ಎಸ್ . ಎ.ಸಾಂವಗಾಂವ, ಮಾಜಿ ತಾಲೂಕಾ ಪಂಚಾಯಿತಿ ಸದಸ್ಯ ಅಪ್ಪಣ್ಣ ಮುಜಗಣ್ಣವರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಮುಜಗಣ್ಣವರ, ಮುಖಂಡ ಬಾಹುಸಾಹೇಬ ಜಾಧವ, ಸಿದರಾಯ ಗೊಲಬಾವಿ, ನಾನಾಸಾಹೇಬ ತೇಲಿ, ಶಿವಾನಂದ ಅವತಾಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು