5:29 AM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್

03/10/2022, 16:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಳ್ಳಿ ಗ್ರಾಮದಲ್ಲಿ 21.40 ಕೋಟಿ ವೆಚ್ಚದ ಪಾರ್ಥನಳ್ಳಿ ಹಳೆ ಕಿರಣಗಿ ರಸ್ತೆ , 212 ಲಕ್ಷ ವೆಚ್ಚದ ಪಾರ್ಥನಳ್ಳಿ ಜಾಧವ ತೋಟದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಾಗವಾಡ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದಾಗಿದೆ, ಮೂಲ ಸೌಲಭ್ಯ ಗಳಾದ ರಸ್ತೆ , ಕುಡಿಯುವ ನೀರು , ಚರಂಡಿ, ಶಾಲಾ ಕಟ್ಟಡ, ಶೌಚಾಲಯ, ರೈತರ ಜಮೀನುಗಳಿಗೆ ನೀರಾವರಿ, ಶಿಕ್ಷಕರ ನೇಮಕಾತಿ , ಆಸ್ಪತ್ರೆ ಸೇರಿದಂತೆ ಹಲವಾ ರು ಸೌಲಭ್ಯಗಳು ಜನರಿಗೆ ದೊರೆಯಬೇಕು.

ಇದೇ ಸಂದರ್ಭದಲ್ಲಿ ಜ್ಯೋತಿ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಪಂಚಾಯತ್ ರಾಜ್ಯ ಇಲಾಖೆಯ ಅಭಿಯಂತರ ವೀರಣ್ಣ ವಾಲಿ, ಎಸ್ . ಎ.ಸಾಂವಗಾಂವ, ಮಾಜಿ ತಾಲೂಕಾ ಪಂಚಾಯಿತಿ ಸದಸ್ಯ ಅಪ್ಪಣ್ಣ ಮುಜಗಣ್ಣವರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಮುಜಗಣ್ಣವರ, ಮುಖಂಡ ಬಾಹುಸಾಹೇಬ ಜಾಧವ, ಸಿದರಾಯ ಗೊಲಬಾವಿ, ನಾನಾಸಾಹೇಬ ತೇಲಿ, ಶಿವಾನಂದ ಅವತಾಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು