8:23 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸಚಿವ ಸ್ಥಾನಕ್ಕಿಂತ ನನ್ನ ಕ್ಷೇತ್ರದ ಅಭಿವೃದ್ದಿಯೇ ಮುಖ್ಯ: ಶ್ರೀಮಂತ ಪಾಟೀಲ್

03/10/2022, 16:52

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ಮತಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಪಡಿಸುವುದೇ ನನ್ನ ಗುರಿಯಾಗಿದೆ ಹೊರತು, ಸಚಿವ ಸಂಪುಟದಲ್ಲಿ ಸೇರ್ಪಡೆಯಾಗುವುದಲ್ಲ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾರ್ಥನಳ್ಳಿ ಗ್ರಾಮದಲ್ಲಿ 21.40 ಕೋಟಿ ವೆಚ್ಚದ ಪಾರ್ಥನಳ್ಳಿ ಹಳೆ ಕಿರಣಗಿ ರಸ್ತೆ , 212 ಲಕ್ಷ ವೆಚ್ಚದ ಪಾರ್ಥನಳ್ಳಿ ಜಾಧವ ತೋಟದ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕಾಗವಾಡ ಮತಕ್ಷೇತ್ರವನ್ನು ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿಸುವ ಗುರಿ ನನ್ನದಾಗಿದೆ, ಮೂಲ ಸೌಲಭ್ಯ ಗಳಾದ ರಸ್ತೆ , ಕುಡಿಯುವ ನೀರು , ಚರಂಡಿ, ಶಾಲಾ ಕಟ್ಟಡ, ಶೌಚಾಲಯ, ರೈತರ ಜಮೀನುಗಳಿಗೆ ನೀರಾವರಿ, ಶಿಕ್ಷಕರ ನೇಮಕಾತಿ , ಆಸ್ಪತ್ರೆ ಸೇರಿದಂತೆ ಹಲವಾ ರು ಸೌಲಭ್ಯಗಳು ಜನರಿಗೆ ದೊರೆಯಬೇಕು.

ಇದೇ ಸಂದರ್ಭದಲ್ಲಿ ಜ್ಯೋತಿ ನಗರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಅಳವಡಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು.

ಈ ವೇಳೆ ಪಂಚಾಯತ್ ರಾಜ್ಯ ಇಲಾಖೆಯ ಅಭಿಯಂತರ ವೀರಣ್ಣ ವಾಲಿ, ಎಸ್ . ಎ.ಸಾಂವಗಾಂವ, ಮಾಜಿ ತಾಲೂಕಾ ಪಂಚಾಯಿತಿ ಸದಸ್ಯ ಅಪ್ಪಣ್ಣ ಮುಜಗಣ್ಣವರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಾನಂದ ಮುಜಗಣ್ಣವರ, ಮುಖಂಡ ಬಾಹುಸಾಹೇಬ ಜಾಧವ, ಸಿದರಾಯ ಗೊಲಬಾವಿ, ನಾನಾಸಾಹೇಬ ತೇಲಿ, ಶಿವಾನಂದ ಅವತಾಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು