6:59 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಜನಸಾಗರದ ನಡುವೆ ಕುಡ್ಲದ ‘ಪಿಲಿಪರ್ಬ’ದ ಮೊದಲ ಆವೃತ್ತಿಗೆ ವಿಧ್ಯುಕ್ತ ತೆರೆ: ಪೊಳಲಿ ಟೈಗರ್ಸ್ ಪ್ರಥಮ

03/10/2022, 23:49

ಮಂಗಳೂರು(reporter Karnataka.com): ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ, ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಟಾನ ಆಯೋಜಿಸಿದ ‘ಕುಡ್ಲದ ಪಿಲಿಪರ್ಬ 2022’ ಭಾನುವಾರ ರಾತ್ರಿ ಅದ್ದೂರಿಯಾಗಿ ಸಮಾಪನಗೊಂಡಿತು. ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್ ಪ್ರಥಮ ಸ್ಥಾನದೊಂದಿಗೆ ಆಕರ್ಷಕ ಟ್ರೋಫಿಯನ್ನು ಪಡೆದು 2022 ಪಿಲಿಪರ್ಬದ ವಿಜೇತ ತಂಡವಾಗಿ ಮೂಡಿಬಂದಿದೆ.
ಪ್ರಥಮ ರನ್ನರ್ ಅಪ್ ತಂಡವಾಗಿ ಕಾಳಿಚರಣ್ ಫ್ರೆಂಡ್ಸ್ (ರಿ) ನೇಶನಲ್ ಬೋಳೂರು,ಎರಡನೇ ರನ್ನರ್ ಅಪ್ ಆಗಿ ನಂದಿಗುಡ್ಡೆ ಫ್ರೆಂಡ್ಸ್ ಹುಲಿ, ಬಾಬುಗುಡ್ಡೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿವೆ.

ವಿಶೇಷ ಪ್ರಶಸ್ತಿಗಳನ್ನು ಕೂಡ ನೀಡಲಾಗಿದ್ದು, *ಪರ್ಬದ ಪಿಲಿ ಪ್ರಶಸ್ತಿಯನ್ನು ತುಳುವೆರ್ ಕುಡ್ಲ ಶ್ರೀರಾಮ ಕ್ರಿಕೆಟರರ್ಸ್,

*ತಾಸೆ ಕ್ಯಾಟಗರಿಯಲ್ಲಿ ಕೊಡಿಯಾಲ್ ಬೈಲ್ ಫ್ರೆಂಡ್ಸ್,

*ಮರಿಪಿಲಿ ಪ್ರಶಸ್ತಿಯನ್ನು ಮುಳಿಹಿತ್ಲು ಫ್ರೆಂಡ್ಸ್,

*ಕಪ್ಪು ಪಿಲಿ ಪ್ರಶಸ್ತಿಯನ್ನು ಕೋಡಿಕಲ್ ವಿಶಾಲ್ ಟೈಗರ್ಸ್,

*ಧರಣಿ ಮಂಡಲ ಪ್ರಶಸ್ತಿಯನ್ನು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು, ಪೊಳಲಿ ಟೈಗರ್ಸ್,

*ವಿಶೇಷ ಬಣ್ಣಗಾರಿಕೆಗಾಗಿ ಕಾಳಿಚರಣ್ ಫ್ರೆಂಡ್ಸ್ (ರಿ) ನೇಶನಲ್ ಬೋಳೂರು,

*ಮುಡಿ ಪ್ರಶಸ್ತಿಯನ್ನು ನಂದಿಗುಡ್ಡೆ ಫ್ರೆಂಡ್ಸ್ ಹುಲಿ ಬಾಬುಗುಡ್ಡೆ ಪುರಸ್ಕೃತರಾಗುವ ಮೂಲಕ ವಿಶೇಷ ಬಹುಮಾನಗಳನ್ನು ಗೆದ್ದುಕೊಂಡವು.

*ವಿಶೇಷವಾಗಿ ಶಿಸ್ತಿನ ತಂಡ ಪ್ರಶಸ್ತಿಯನ್ನು ಜೈ ಶಾರದಾಂಬ, ಪೇಜಾವರ ಪೋರ್ಕೋಡಿ ತಂಡಕ್ಕೆ ನೀಡಿ ಗೌರವಿಸಲಾಯಿತು.

ತೀರ್ಪುಗಾರರಾಗಿ ಬಜಿಲಕೇರಿ ಕಮಲಾಕ್ಷ, ಕೆ.ಕೆ. ಪೇಜಾವರ, ವೆಂಕಟೇಶ್ ಭಟ್, ನವೀನ್ ಕುಮಾರ್ ಉಪಸ್ಥಿತರಿದ್ದರು.

ವಿಶ್ಲೇಷಣಾಕಾರರಾಗಿ ಕದ್ರಿ ನವನೀತ್ ಶೆಟ್ಟಿ, ಮನೋಹರ್ ಪ್ರಸಾದ್ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಶಾಸಕ ವೇದವ್ಯಾಸ ಕಾಮತ್, ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ ಪಾಂಡೇಶ್ವರ ಪ್ರಶಸ್ತಿಗಳನ್ನು ವಿತರಿಸಿದರು. ಸಂಘಟಕ ಮಂಗಲ್ಪಾಡಿ ನರೇಶ್ ಶೆಣೈ, ಉದಯ್ ಪೂಜಾರಿ ಬಳ್ಳಾಲ್ ಬಾಗ್, ಲಲಿತ್ ಮೆಂಡನ್, ಚೇತನ್ ಕಾಮತ್, ನರೇಶ್ ಪ್ರಭು, ಸೂರಜ್ ಕಾಮತ್ ಕೊಂಚಾಡಿ, ಕಿರಣ್ ಶೆಣೈ, ಮನೋಹರ್ ಶೆಟ್ಟಿ, ಜಗದೀಶ್ ಕದ್ರಿ, ಶಾನು ಕೋಡಿಕೆರೆ, ವಿಜಯ ಕುಮಾರ್ ಶೆಟ್ಟಿ ಹಾಗೂ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಮಧುರಾಜ್, ಸೌಮ್ಯ ಕೋಟ್ಯಾನ್, ಶರ್ಮಿಳಾ ಅಮೀನ್, ಅಭಿಷೇಕ್ ಶೆಟ್ಟಿ, ಮಧು ಮೈಲಂಕೋಡಿ ನಿರೂಪಿಸಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಶಾಸಕರುಗಳಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದ್ರೆ, ಶ್ರೀಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಸಾಯಿರಾಂ, ವಿಶ್ವ ಹಿಂದೂ ಪರಿಷತ್ ಮುಖಂಡರಾದ ಶರಣ್ ಪಂಪ್ ವೆಲ್, ಸಿನೆಮಾ ತಾರೆಯರಾದ ದೇವದಾಸ್ ಕಾಪಿಕಾಡ್, ವಿಜಯ ಕುಮಾರ್ ಕೊಡಿಯಾಲ್ ಬೈಲ್, ಅರವಿಂದ ಬೋಳಾರ್, ಅರ್ಜುನ್ ಕಾಪಿಕಾಡ್, ವಿನಿತ್, ಬಿಜೆಪಿ ಮುಖಂಡರಾದ ಹರಿಕೃಷ್ಣ ಬಂಟ್ವಾಳ, ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲಸಾರ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಪ್ರಾಯೋಜಕರಾದ ಎಸ್ ಕೆ ಎಸ್ ಬಿಲ್ಡರ್ ಸುಜೀತ್ ಶೆಟ್ಟಿ, ಐಎಂಅವತಾರ್ ಸಂಸ್ಥೆಯ ಮಾಲೀಕರಾದ ಮುಂಬೈ ಉದ್ಯಮಿ ದೀಪಕ್ ಶೆಣೈ ವಾಶಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ಹ್ಯಾಂಗ್ಯೋ ಐಸ್ ಕ್ರೀಂ ಪ್ರದೀಪ್ ಪೈ, ಕಾಮತ್ ಕೇಟರರ್ಸ್ ಸುಧಾಕರ್ ಕಾಮತ್ ಹಾಗೂ ಗಣ್ಯರು, ಉದ್ಯಮಿಗಳು, ವಿವಿಧ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು