12:51 AM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ ವಿತರಣೆಯಲ್ಲಿ ಭ್ರಷ್ಟಾಚಾರ ವಾಸನೆ: ದಸಂಸ ಎಚ್ಚರಿಕೆ

29/06/2021, 09:36

ವರದಿ: ಅಮರೇಶ್ ಲಿಂಗಸುಗೂರು ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಮಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಳ್ಳಿಗಳಿಗಳ ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಸರಕಾರದಿಂದ ಶೇ. 25 ಅನುದಾನದಲ್ಲಿ ಸಿಗುವ ಪಠ್ಯ ಪುಸ್ತಕವನ್ನು ವಿತರಣೆಯಲ್ಲಿ ವಿಳಂಬವಾಗಿದ್ದು ಈ ಕೂಡಲೇ ನೀಡಬೇಕೆಂದು ಪಿಡಿಓ ಹಾಗೂ ಅಧ್ಯಕ್ಷರಿಗೆ ಗ್ರಾಮದ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಹಿಂದೆ ಪುಸ್ತಕ ನೀಡುವುದಾಗಿ ಭರವಸೆ ನೀಡಿ ಬೇಕಾಬಿಟ್ಟಿ 700 – 1500 ರೂಪಾಯಿ ನೀಡಲಾಗಿದ್ದು ಅಲ್ಲದೆ, ಬುಕ್ ಸ್ಟಾಲ್ ನವರ ಜತೆಗೆ ಒಳಒಪ್ಪಂದ ಮಾಡಿಕೊಂಡು ಭ್ರಷ್ಟಾಚಾರ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಈ ಬಾರಿಯೂ ಇದೇ ರೀತಿಯ ಭ್ರಷ್ಟಾಚಾರದ ವಾಸನೆ ಕಂಡು ಬಂದಿದ್ದು ಹಾಗೂ ಪುಸ್ತಕದ ವಿತರಣೆಯಲ್ಲಿ ಅಸಡ್ಡೆ ತೋರಿಸಿದರೆ ತೀವ್ರ ಹೋರಾಟ ನಡೆಸುವುದಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎಚ್ಚರಿಸಿದರು.

ಪಿಯುಸಿ  ವಿದ್ಯಾರ್ಥಿಗಳಿಗೆ 2000 ನೀಡಬೇಕು, ಪದವಿ ವಿದ್ಯಾರ್ಥಿಗಳಿಗೆ 2000 ನೀಡಬೇಕು, ವೃತ್ತಿಪರ ವಿದ್ಯಾರ್ಥಿಗಳಿಗೆ 5000 ನೀಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಯಲ್ಲಾಲಿಂಗ ಕುಣೆಕೆಲ್ಲೂರು (ತಾಲೂಕು ಅಧ್ಯಕ್ಷರು ಮಸ್ಕಿ) , ಗ್ರಾಮ ಪಂಚಾಯತ್ ಮೌನೇಶ್ ಕುಣೆಕೆಲ್ಲೂರು , ಸಿದ್ದಪ್ಪ ಕುಣೆಕೆಲ್ಲೂರು , ಹುಲುಗಪ್ಪ ಕುಣೆಕೆಲ್ಲೂರು , ವೆಂಕಟೇಶ ನಾಯಕ , ಚಂದ್ರಶೇಖರ , ನಾಗರಾಜ , ಬಸವರಾಜ , ಅಭಿ , ಯಲ್ಲಪ್ಪ ಎ., ದುರುಗಪ್ಪ ಹಾಗೂ ಗ್ರಾಮದ ಯುವಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು