12:40 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಅಥಣಿ: ನೀರು ಪಾಲಾದ ನಾಲ್ವರು ಸಹೋದರರ ಮೃತದೇಹ ಪತ್ತೆಗೆ ಮುಂದುವರಿದ ಶೋಧ ಕಾರ್ಯಾಚರಣೆ; ಗದ್ಗದಿತರಾದ ಸಹಾಯಕ ಕಮಿಷನರ್

29/06/2021, 15:45

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೃಷ್ಣಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ 4 ಮಂದಿ ಸಹೋದರರ ತಾಯಿಯ ಅಳಲನ್ನು ಕೇಳಿ ಚಿಕ್ಕೋಡಿ ಸಹಾಯಕ ಕಮಿಷನರ್ ಯವಕೀಶ ಕುಮಾರ್ ಮೌನವಾಗಿ ರೋಧಿಸಿದರು. ಈ ನಡುವೆ ಮೃತದೇಹಗಳ ಶೋಧ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.

ನಿನ್ನೆ ನಡೆದ ದುರ್ಘಟನೆಯಲ್ಲಿ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಒಂದೇ ಕುಟುಂಬದ 4 ಮಂದಿ ಸಹೋದರರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದರು.


ಚಿಕ್ಕೋಡಿಯ ಎಸಿ ಯವಕೀಶ ಕುಮಾರ್ ಅವರು ಮಡಿದ ಯುವಕರ ತಾಯಿಯ ಆಕ್ರಂಧನವನ್ನು ಕಂಡು ಕರಗಿ ಹೋದರು. ಮೃತ ಸಹೋದರರ ತಂದೆ ತಾಯಿಗೆ ಸಾಂತ್ವನ ಹೇಳಿದರು.

ಘಟನಾ ಸ್ಥಳದಲ್ಲೇ ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ಆದಷ್ಟು ಬೇಗ ಮೃತದೇಹಗಳ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಎಸಿ ಸೂಚಿಸಿದರು.

ನಂತರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಯವಕೀಶ ಕುಮಾರ್, ಈಗಾಗಲೇ ಜಿಲ್ಲಾಧಿಕಾರಿಗಳ ಮುತುವರ್ಜಿಯಿಂದ ಕೊಲ್ಲಾಪುರದ ಈಜುಗಾರರನ್ನು ಸ್ಥಳದಲ್ಲಿ ಕರೆಸಲಾಗಿದ್ದು ಆದಷ್ಟು ಬೇಗ ಮೃತ ಶರೀರಗಳನ್ನು ಪತ್ತೆ ಮಾಡಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು