9:22 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಪರೇಶ್ ಮೇಸ್ತಾ ಕುಟುಂಬ ಮೇಲ್ಮನವಿ, ಮರು ತನಿಖೆಗೆ ಬಯಸಿದ್ರೆ ಅವರ ಜತೆ ನಿಲ್ಲುತ್ತೇವೆ: ಸಿ.ಟಿ.ರವಿ

04/10/2022, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Info.reporter Karnataka agnail.com

ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗಣಪತಿ ಲೈವ್ ಸ್ಟೇಟ್ಮೆಂಟ್ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ರು. ಲೈವ್ ಸ್ಪೇಟ್ಮೆಂಟ್ನ ಡೆತ್ ಸ್ಟೇಟ್ಮೆಂಟ್ ಎಂದು ಪರಿಗಣನೆ ಮಾಡ್ತಾರೆ. ಆದರೆ ಆ ಸ್ಟೇಟ್ಮೆಂಟ್ಗೂ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

55-60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪಕ್ಷದ ಬೇರು-ಬಾಹು ಎಲ್ಲೆಲ್ಲಿ ಇದೆಯೋ..? ಕಾಂಗ್ರೆಸ್ನ ಪ್ರಭಾವ ವಲಯ ಎಲ್ಲೆಲ್ಲಿದೆಯೋ ಹೇಳಕ್ಕಾಗಲ್ಲ, ಅಷ್ಟನ್ನ ಹೇಳ್ತೀನಿ. ಎಷ್ಟೋ ಪ್ರಕರಣಗಳು ರೀ ಓಪನ್ ಆಗಿ ಹತ್ತಾರು ವರ್ಷಗಳ ಬಳಿಕ ಶಿಕ್ಷೆಯಾಗಿದೆ. ಸಿದ್ದರಾಮಯ್ಯ ವಕೀಲರು, ಇದೆಲ್ಲಾ ಅವರಿಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ಸಿದ್ದರಾಮಯ್ಯ ತನ್ನೆಲ್ಲಾ ಪಾಪದಿಂದ ಮುಕ್ತನಾಗಿದ್ದೇನೆ ಎಂದು ಭಾವಿಸುವುದು ಬೇಡ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು