12:06 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವದ ಶೋಭಾಯಾತ್ರೆ: ಕಡಲನಗರಿಯಲ್ಲಿ ಎಲ್ಲೆಂದರಲ್ಲಿ ಜನಸಾಗರ!; ಲಾಡ್ಜ್ ಗಳು ಫುಲ್ !

06/10/2022, 03:29

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporter Karnataka): ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಪಡೆದ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ 
ಮಹೋತ್ಸವದ ಕೊನೆಯ ದಿನವಾದ ಬುಧವಾರ ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ಭಕ್ತಿ ಸಂಭ್ರಮದಿಂದ ನಡೆಯಿತು.


ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ಶೋಭಾಯಾತ್ರೆ ಲೇಡಿಹಿಲ್ ಮಾರ್ಗವಾಗಿ ಲಾಲ್ ಭಾಗ್ ತಲುಪುವಾಗ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರೀ ಸಂಖ್ಯೆಯಲ್ಲಿ ಲಾಲ್ ಬಾಗ್ , ಬಳ್ಳಾಲ್ ಬಾಗ್ ಪ್ರದೇಶದಲ್ಲಿ ನೆರೆದಿದ್ದರು. ಎಂ.ಜಿ.ರೋಡ್ ಜನಸಾಗರವಾಗಿ ಮಾರ್ಪಟ್ಟಿತ್ತು. ರಸ್ತೆಯ ಇಕ್ಕೆಲೆಗಳಲ್ಲಿ ಮಾತ್ರವಲ್ಲದೆ ರಸ್ತೆಯ ಮಧ್ಯದ ಡಿವೈಡರ್ ನಲ್ಲಿ ಕೂಡ ನಿಂತು ಜನರು ದಸರಾ ಮೆರವಣಿಗೆ ಹಾಗೂ ಶಾರದೆ ಮತ್ತು ನವದುರ್ಗೆಯರನ್ನು ಬರ ಮಾಡಿಕೊಂಡರು. ವಿವಿಧ ಕಟ್ಟಡಗಳ ಅಂತಸ್ತಿನಲ್ಲಿ ಹಾಗೂ ಟೆರೆಸ್ ಮೇಲೆ ನಿಂತು ಜನರು ದಸರಾ ಮೆರವಣಿಗೆಯನ್ನು ವೀಕ್ಷಿಸಿದರು. ವಿವಿಧ ಸ್ವಯಂಸೇವಾ ಸಂಸ್ಥೆ ಹಾಗೂ ಸಾಂಸ್ಕೃತಿಕ ಸಂಘಟನೆಗಳಿಂದ ವಿವಿಧ ತರಹದ ಟ್ಯಾಬ್ಲೋಗಳು ಜನರನ್ನು ಆಕರ್ಷಿಸಿತು.



ಮಂಗಳೂರು ದಸರಾ ಸಂಭ್ರಮದ ಸವಿಯಲ್ಲಿ ಕರಾವಳಿ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಮಂಗಳೂರಿಗೆ ಆಗಮಿಸಿದ್ದರು. ನಗರದ ಎಲ್ಲ ಲಾಡ್ಜ್ ಗಳು ಭರ್ತಿಯಾಗಿದ್ದವು. ಕೆಲವು ಲಾಡ್ಜ್ ಗಳು 24 ತಾಸಿನ ಬದಲು ಗೋವಾ ಮಾದರಿಯಲ್ಲಿ 12 ತಾಸಿಗೆ ಚೆಕ್ ಔಟ್ ಮಾಡುತ್ತಿದ್ದವು. ಹೊರಗಡೆಯಿಂದ ಬಂದ ಸಾಕಷ್ಟು ಪ್ರವಾಸಿಗರು ವಸತಿ ಸೇವೆ ದೊರಕದೆ ಕಾರಿನಲ್ಲೇ ರೆಸ್ಟ್ ತೆಗೆದುಕೊಳ್ಳಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು