8:24 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು ದಸರಾ ವೈಭವದ ಶೋಭಾಯಾತ್ರೆ: ಕಡಲನಗರಿಯಲ್ಲಿ ಎಲ್ಲೆಂದರಲ್ಲಿ ಜನಸಾಗರ!; ಲಾಡ್ಜ್ ಗಳು ಫುಲ್ !

06/10/2022, 03:29

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporter Karnataka): ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಪಡೆದ
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ 
ಮಹೋತ್ಸವದ ಕೊನೆಯ ದಿನವಾದ ಬುಧವಾರ ಶಾರದಾ ಮಾತೆ ಹಾಗೂ ನವ ದುರ್ಗೆಯರ ಶೋಭಾಯಾತ್ರೆ ಭಕ್ತಿ ಸಂಭ್ರಮದಿಂದ ನಡೆಯಿತು.


ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡ ಶೋಭಾಯಾತ್ರೆ ಲೇಡಿಹಿಲ್ ಮಾರ್ಗವಾಗಿ ಲಾಲ್ ಭಾಗ್ ತಲುಪುವಾಗ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರೀ ಸಂಖ್ಯೆಯಲ್ಲಿ ಲಾಲ್ ಬಾಗ್ , ಬಳ್ಳಾಲ್ ಬಾಗ್ ಪ್ರದೇಶದಲ್ಲಿ ನೆರೆದಿದ್ದರು. ಎಂ.ಜಿ.ರೋಡ್ ಜನಸಾಗರವಾಗಿ ಮಾರ್ಪಟ್ಟಿತ್ತು. ರಸ್ತೆಯ ಇಕ್ಕೆಲೆಗಳಲ್ಲಿ ಮಾತ್ರವಲ್ಲದೆ ರಸ್ತೆಯ ಮಧ್ಯದ ಡಿವೈಡರ್ ನಲ್ಲಿ ಕೂಡ ನಿಂತು ಜನರು ದಸರಾ ಮೆರವಣಿಗೆ ಹಾಗೂ ಶಾರದೆ ಮತ್ತು ನವದುರ್ಗೆಯರನ್ನು ಬರ ಮಾಡಿಕೊಂಡರು. ವಿವಿಧ ಕಟ್ಟಡಗಳ ಅಂತಸ್ತಿನಲ್ಲಿ ಹಾಗೂ ಟೆರೆಸ್ ಮೇಲೆ ನಿಂತು ಜನರು ದಸರಾ ಮೆರವಣಿಗೆಯನ್ನು ವೀಕ್ಷಿಸಿದರು. ವಿವಿಧ ಸ್ವಯಂಸೇವಾ ಸಂಸ್ಥೆ ಹಾಗೂ ಸಾಂಸ್ಕೃತಿಕ ಸಂಘಟನೆಗಳಿಂದ ವಿವಿಧ ತರಹದ ಟ್ಯಾಬ್ಲೋಗಳು ಜನರನ್ನು ಆಕರ್ಷಿಸಿತು.



ಮಂಗಳೂರು ದಸರಾ ಸಂಭ್ರಮದ ಸವಿಯಲ್ಲಿ ಕರಾವಳಿ ಮಾತ್ರವಲ್ಲದೆ ಹೊರ ರಾಜ್ಯ ಹಾಗೂ ವಿದೇಶಗಳಿಂದಲೂ ಪ್ರವಾಸಿಗರು ಮಂಗಳೂರಿಗೆ ಆಗಮಿಸಿದ್ದರು. ನಗರದ ಎಲ್ಲ ಲಾಡ್ಜ್ ಗಳು ಭರ್ತಿಯಾಗಿದ್ದವು. ಕೆಲವು ಲಾಡ್ಜ್ ಗಳು 24 ತಾಸಿನ ಬದಲು ಗೋವಾ ಮಾದರಿಯಲ್ಲಿ 12 ತಾಸಿಗೆ ಚೆಕ್ ಔಟ್ ಮಾಡುತ್ತಿದ್ದವು. ಹೊರಗಡೆಯಿಂದ ಬಂದ ಸಾಕಷ್ಟು ಪ್ರವಾಸಿಗರು ವಸತಿ ಸೇವೆ ದೊರಕದೆ ಕಾರಿನಲ್ಲೇ ರೆಸ್ಟ್ ತೆಗೆದುಕೊಳ್ಳಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು