9:07 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಥಣಿ: 12 ಅಡಿ ಆಳದ ಟ್ಯಾಂಕ್ ನಲ್ಲಿ ಕುಸಿದು ಬಿದ್ದ 3 ಪುರಸಭೆ ಸಿಬ್ಬಂದಿಗಳ ರಕ್ಷಣೆ

06/10/2022, 13:56

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಪಟ್ಟಣದ ಉರ್ದು ಶಾಲೆಯ ಹತ್ತಿರ 12 ಅಡಿ ಆಳವಿರುವ ಚೆಂಬರನಲ್ಲಿ ಪೌಡರ್ ಸಿಂಪಡನೆ ಮಾಡಿ ಚೆಂಬರನ ವಾಲ್ ಬಂದ ಮಾಡಬೇಕೆಂದು ಟ್ಯಾಂಕನಲ್ಲಿ ಕೆಳಗಿಳಿದು ಕಾರ್ಯಚರಣೆಯನ್ನು ಮಾಡುವ ಸಂದರ್ಭದಲ್ಲಿ ಮೂವರು ಪುರಸಭೆ ಸಿಬ್ಬಂದಿಗಳಿಗೆ ಆಮ್ಲಜನಕ ಕೊರತೆಯಾಗಿ ಟ್ಯಾಂಕ್ ನಲ್ಲಿಯೇ ಕುಸಿದು ಬಿದ್ದಿವರನ್ನು ರಕ್ಷಣೆ ಮಾಡಿರುವ ಘಟನೆ‌ ನಿನ್ನೆ ಜರುಗಿದೆ.

ಟ್ಯಾಂಕ್ ಒಳಗೆ ಇಳಿದ ಸಿಬ್ಬಂದಿಗಳನ್ನು ಟ್ಯಾಂಕಿನ‌‌ ಮೇಲಿರುವ ಮತ್ತೋರ್ವ ಪುರಸಭೆ ಸಿಬ್ಬಂದಿ ಕುಮಾರ ಮಾಳಿ ಗಮನಿಸಿ ಖುದ್ದಾಗಿ ಠಾಣೆಗೆ‌ ಮಾಹಿತಿ‌ ನೀಡಿದ ನಂತರ ತಕ್ಷಣ ಅಥಣಿ ಅಗ್ನಿಶಾಮಕ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಟ್ಯಾಂಕನಲ್ಲಿ ಬಿದ್ದಿದ್ದ ಪ್ರಕಾಶ ಅಶೋಕ ಕುಂಬಾರ (35 ), ಅಪ್ಪಾಸಾಬ ಅಥಣಿಕರ(40), ರಮೇಶ ಪೂಜಾರಿ (42) ಎಂಬುವವರನ್ನು ಜೀವಂತವಾಗಿ ಟ್ಯಾಂಕನಿಂದ ಹೊರ ತೆಗೆದು ಜೀವಂತ ರಕ್ಷಣೆ ಮಾಡಿದರು.         


ಈ ರಕ್ಷಣಾ ಕಾರ್ಯಚರಣೆಯಲ್ಲಿ ರಾಜು ತಳವಾರ, ಎ.ಬಿ. ಬಡಚಿ, ಎಮ್.ಬಿ.ಬಿರಾದಾರ, ನೀಲಪ್ಪ ಹೇರವಾಡೆ, ಎಮ್.ಎಸ್. ಕುಂಬಾರ, ಸುರೇಶ ಮಾದರ, ಶಿವಪ್ಪ ಹಣಮಾಪೂರ, ರವೀಂದ್ರ ಸಂಗಮ, ಶಿವಾನಂದ ಶಿರಹಟ್ಟಿ,ಸಚೀನ ಹಲ್ಯಾಳ, ಶಿವಯ್ಯ ಮಠಪತಿ, ಸಂತೋಷ ಚೌಗುಲಾ, ಸಂತೋಷ ಧರ್ಮಟ್ಟಿ ಸೇರಿದಂತೆ ಇತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು