8:40 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ

06/10/2022, 21:10

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಕಾಗವಾಡ  ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ ಹಂಗಾಮಿಗೆ ಚಾಲನೆ ನೀಡಿ ಮಾತನಾಡುತ್ತಾ ಕಳೆದ ವರ್ಷ ಸನ್ 2021-22 ನೇ ಸಾಲಿನಲ್ಲಿ ನಮ್ಮ ಕಾರ್ಖಾನೆಗೆ ರೈತ ಬಾಂಧವರು ಸುಮಾರು 17 ಲಕ್ಷ ಟನ್ ಕಬ್ಬು ನೀಡಿ ಸಹಕರಿಸಿ, ವಿಶೇಷ ದಾಖಲೆ ನಿರ್ಮಿಸಲು ಕಾರಣೀಭೂತರಾಗಿದ್ದೀರಿ. ಅದೇ ಪ್ರಕಾರ ನಾವು ರೈತರಿಗೆ ಪ್ರತಿ ಟನ್ ಗೆ 2700 ರೂ. ರಂತೆ ದರವನ್ನು ನೀಡಿದ್ದೇವು.

ಈ ಸನ್ 2022 – 23 ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆಯೂ 20 ಲಕ್ಷ ಟನ್ ಕಬ್ಬು ನುರಿಸುವ ಉದ್ದೇಶವನ್ನು ಹೊಂದಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಟನ್ ಗೆ ರೂ. 2800/- ರಂತೆ ದರವನ್ನು ನೀಡಲು ಸಿದ್ಧರಾಗಿರುವುದಾಗಿ ಹೇಳಿದರು. 

ರೈತ ಬಾಂಧವರು ನಮ್ಮ ಕಾರ್ಖಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಸಹಕರಿಸುವಂತೆ ಶ್ರೀನಿವಾಸ ಪಾಟೀಲ ಮನವಿ ಮಾಡಿಕೊಂಡರು.

 ಈ ಸಮಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ, ಕಾರ್ಯನಿರ್ವಾಹಕ ನಿರ್ದೇಶಕ ಯೋಗೇಶ ಪಾಟೀಲ, ಸುಶಾಂತ  ಪಾಟೀಲ, ಅಬ್ದುಲಬಾರಿ ಮುಲ್ಲಾ ಹಾಗೂ ಕಾರ್ಖಾನೆಯ ನಿರ್ದೇಶಕ ಮಂಡಳಿಯ ಸದಸ್ಯರು, ಸ್ಥಳೀಯ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾರ್ಖಾನೆಯ ವಿವಿಧ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿಗಳು ಕಾರ್ಮಿಕರು ಅಪಾರ ಸಂಖ್ಯೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು