1:10 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ

06/10/2022, 21:10

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಕಾಗವಾಡ  ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ ಹಂಗಾಮಿಗೆ ಚಾಲನೆ ನೀಡಿ ಮಾತನಾಡುತ್ತಾ ಕಳೆದ ವರ್ಷ ಸನ್ 2021-22 ನೇ ಸಾಲಿನಲ್ಲಿ ನಮ್ಮ ಕಾರ್ಖಾನೆಗೆ ರೈತ ಬಾಂಧವರು ಸುಮಾರು 17 ಲಕ್ಷ ಟನ್ ಕಬ್ಬು ನೀಡಿ ಸಹಕರಿಸಿ, ವಿಶೇಷ ದಾಖಲೆ ನಿರ್ಮಿಸಲು ಕಾರಣೀಭೂತರಾಗಿದ್ದೀರಿ. ಅದೇ ಪ್ರಕಾರ ನಾವು ರೈತರಿಗೆ ಪ್ರತಿ ಟನ್ ಗೆ 2700 ರೂ. ರಂತೆ ದರವನ್ನು ನೀಡಿದ್ದೇವು.

ಈ ಸನ್ 2022 – 23 ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆಯೂ 20 ಲಕ್ಷ ಟನ್ ಕಬ್ಬು ನುರಿಸುವ ಉದ್ದೇಶವನ್ನು ಹೊಂದಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಟನ್ ಗೆ ರೂ. 2800/- ರಂತೆ ದರವನ್ನು ನೀಡಲು ಸಿದ್ಧರಾಗಿರುವುದಾಗಿ ಹೇಳಿದರು. 

ರೈತ ಬಾಂಧವರು ನಮ್ಮ ಕಾರ್ಖಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಸಹಕರಿಸುವಂತೆ ಶ್ರೀನಿವಾಸ ಪಾಟೀಲ ಮನವಿ ಮಾಡಿಕೊಂಡರು.

 ಈ ಸಮಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ, ಕಾರ್ಯನಿರ್ವಾಹಕ ನಿರ್ದೇಶಕ ಯೋಗೇಶ ಪಾಟೀಲ, ಸುಶಾಂತ  ಪಾಟೀಲ, ಅಬ್ದುಲಬಾರಿ ಮುಲ್ಲಾ ಹಾಗೂ ಕಾರ್ಖಾನೆಯ ನಿರ್ದೇಶಕ ಮಂಡಳಿಯ ಸದಸ್ಯರು, ಸ್ಥಳೀಯ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾರ್ಖಾನೆಯ ವಿವಿಧ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿಗಳು ಕಾರ್ಮಿಕರು ಅಪಾರ ಸಂಖ್ಯೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು