6:30 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ; 20 ಲಕ್ಷ ಟನ್ ಕಬ್ಬು ಅರೆಯುವ ಗುರಿ

06/10/2022, 21:10

ರಾಹುಲ್ ಅಥಣಿ ಬೆಳಗಾವಿ

info.reporter Karnataka agnail.com

ಕಾಗವಾಡ  ತಾಲೂಕಿನ ಕೆಂಪವಾಡ ಗ್ರಾಮದಲ್ಲಿರುವ ಅಥಣಿ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಸನ್ 2022-23 ನೇ ಕಬ್ಬು ನುರಿಸುವ ಹಂಗಾಮಿಗೆ ವಿಜಯದಶಮಿ ಹಾಗೂ ದಸರಾ ಹಬ್ಬದ ಶುಭ ಮಹೂರ್ತದಲ್ಲಿ ಕಾರ್ಖಾನೆಯ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರು ಹಾಗೂ ಮಾಜಿ ಸಚಿವ ಶ್ರೀಮಂತ ಪಾಟೀಲ ಅವರು ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಕಾರ್ಖಾನೆಯ ಅಧ್ಯಕ್ಷ ಶ್ರೀಮಂತ ಪಾಟೀಲ ಹಾಗೂ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ ಹಂಗಾಮಿಗೆ ಚಾಲನೆ ನೀಡಿ ಮಾತನಾಡುತ್ತಾ ಕಳೆದ ವರ್ಷ ಸನ್ 2021-22 ನೇ ಸಾಲಿನಲ್ಲಿ ನಮ್ಮ ಕಾರ್ಖಾನೆಗೆ ರೈತ ಬಾಂಧವರು ಸುಮಾರು 17 ಲಕ್ಷ ಟನ್ ಕಬ್ಬು ನೀಡಿ ಸಹಕರಿಸಿ, ವಿಶೇಷ ದಾಖಲೆ ನಿರ್ಮಿಸಲು ಕಾರಣೀಭೂತರಾಗಿದ್ದೀರಿ. ಅದೇ ಪ್ರಕಾರ ನಾವು ರೈತರಿಗೆ ಪ್ರತಿ ಟನ್ ಗೆ 2700 ರೂ. ರಂತೆ ದರವನ್ನು ನೀಡಿದ್ದೇವು.

ಈ ಸನ್ 2022 – 23 ನೇ ಸಾಲಿನ ಹಂಗಾಮಿನಲ್ಲಿ ನಮ್ಮ ಕಾರ್ಖಾನೆಯೂ 20 ಲಕ್ಷ ಟನ್ ಕಬ್ಬು ನುರಿಸುವ ಉದ್ದೇಶವನ್ನು ಹೊಂದಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರತಿ ಟನ್ ಗೆ ರೂ. 2800/- ರಂತೆ ದರವನ್ನು ನೀಡಲು ಸಿದ್ಧರಾಗಿರುವುದಾಗಿ ಹೇಳಿದರು. 

ರೈತ ಬಾಂಧವರು ನಮ್ಮ ಕಾರ್ಖಾನೆಗೆ ಹೆಚ್ಚಿನ ಪ್ರಮಾಣದಲ್ಲಿ ಉತ್ತಮ ಗುಣಮಟ್ಟದ ಕಬ್ಬನ್ನು ಪೂರೈಸಿ ಸಹಕರಿಸುವಂತೆ ಶ್ರೀನಿವಾಸ ಪಾಟೀಲ ಮನವಿ ಮಾಡಿಕೊಂಡರು.

 ಈ ಸಮಯದಲ್ಲಿ ಅಥಣಿ ಶುಗರ್ಸ್ ಲಿಮಿಟೆಡ್‌ನ ಅಧ್ಯಕ್ಷರು ಹಾಗೂ ಕಾಗವಾಡ ಶಾಸಕರಾದ ಶ್ರೀಮಂತ ಬಾಳಾಸಾಹೇಬ ಪಾಟೀಲ, ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ ಪಾಟೀಲ, ಕಾರ್ಯನಿರ್ವಾಹಕ ನಿರ್ದೇಶಕ ಯೋಗೇಶ ಪಾಟೀಲ, ಸುಶಾಂತ  ಪಾಟೀಲ, ಅಬ್ದುಲಬಾರಿ ಮುಲ್ಲಾ ಹಾಗೂ ಕಾರ್ಖಾನೆಯ ನಿರ್ದೇಶಕ ಮಂಡಳಿಯ ಸದಸ್ಯರು, ಸ್ಥಳೀಯ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾರ್ಖಾನೆಯ ವಿವಿಧ ಇಲಾಖೆಯ ಅಧಿಕಾರಿ ವರ್ಗ, ಸಿಬ್ಬಂದಿಗಳು ಕಾರ್ಮಿಕರು ಅಪಾರ ಸಂಖ್ಯೆಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು